3:51 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ನಂಜನಗೂಡು: ಕೆಐಎಡಿಬಿಗೆ ಭೂಮಿ ನೀಡಿ ಉದ್ಯೋಗ ಸಿಗದ ರೈತ ಆತ್ಮಹತ್ಯೆ; ಜಿಲ್ಲಾಡಳಿತ ವೈಫಲ್ಯದಿಂದ ಕುಟುಂಬ ಅನಾಥ

20/11/2023, 16:52

ಮೋಹನ್ ನಂಜನಗೂಡು ಮೈಸೂರು

info.reeporterkarnataka@gmail.com

ಕೈಗರಿಕಾ ಪ್ರದೇಶಕ್ಕಾಗಿ ರೈತರಿಂದ ಭೂಮಿ ಪಡೆದುಕೊಂಡು ಉದ್ಯೋಗ ನೀಡದೆ ವಂಚನೆ ಮಾಡಿರುವ ಹಿನ್ನಲೆ.ಡೆಟ್ ನೋಟ್ ಬರೆದಿಟ್ಟು ರೈತ ಯುವಕ ಆತ್ಮಹತ್ಯೆ‌ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಯುವಕ ಸಿದ್ದರಾಜು(35) ಎಂಬುವವರೆ ಮೃತ ದುರ್ದೈವಿ.


ಅಡಕನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸೇರಿದ ಮೃತ ಸಿದ್ದರಾಜು ಅವರ ಪಿತ್ರಾರ್ಜಿತ ಆಸ್ತಿಯನ್ನು ಕೆಐಎಡಿಬಿ ವಶಪಡಿಸಿಕೊಂಡು ಅದನ್ನು
ಪಾರ್ಲೆ ಆಗ್ರೋ ಇಂಡಸ್ಟ್ರೀಸ್ ಕಂಪನಿಗೆ ಹಂಚಿಕೆ ಮಾಡಿತ್ತು.
ಆದರೆ ಕೆಐಎಡಿಬಿ ಪ್ರಕಾರ ಭೂಮಿ ಕಳೆದುಕೊಂಡ ರೈತ ಅಥವಾ ರೈತ ಮಕ್ಕಳಿಗೆ ಉದ್ಯೋಗ ನೀಡಬೇಕು ಎಂಬ ನಿಯಮವಿದ್ದರೂ ಮೃತ ರೈತನ ಕುಟುಂಬಕ್ಕೆ ಕೆಐಎಡಿಬಿ ಯಾಗಲಿ ಅಥವ ರೈತರ ಜಮೀನಿನಲ್ಲಿ ಕಾರ್ಖಾನೆ ನಡೆಸುತ್ತಿರುವ ಪಾರ್ಲೆ ಆಗ್ರೋ ಇಂಡಸ್ಟ್ರೀಸ್ ಕಂಪನಿ ಯಾಗಲಿ ಮಾನವೀಯತೆ ದೃಷ್ಟಿಯಿಂದಲಾದರು ಉದ್ಯೋಗ ನೀಡದೆ ಇರುವುದು ಘಟನೆಗೆ ಕಾರಣವೆನ್ನಲಾಗಿದೆ.
ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ಕಾರ್ಖಾನೆ ಮುಂದೆ ಹಸಿರು ಸೇನೆ ಹಾಗೂ ರೈತ ಸಂಘಟನೆ ಗಳು ಕಳೆದ 45 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ಗಳನ್ನು ಸಹ ಹಮ್ಮಿಕೊಂಡಿದ್ದವು. ಆದರೂ ಉದ್ಯೋಗ ನೀಡದ ಕೆಐಎಡಿಬಿ ಹಾಗೂ ಕಾರ್ಖಾನೆಯಿಂದ ಮನನೊಂದ ರೈತ ಸಿದ್ದರಾಜು ಡೆಟ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ‌.
ಮೃತನ ಪತ್ನಿ ರಕ್ಷಿತಾ ನೀಡಿರುವ ದೂರಿನ ಮೇರೆಗೆ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳಿದ್ದಾರೆ.
ಘಟನೆಯ ಬಗ್ಗೆ ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ಕೆಐಎಡಿಬಿ ಹಾಗೂ ಕಾರ್ಖಾನೆ ಯವರ ರೈತ ವಿರೋಧಿ ನೀತಿಯನ್ನು ಖಂಡಿಸಿ ಮೃತನ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು