4:05 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ನಂಜನಗೂಡು: ಕೆಐಎಡಿಬಿಗೆ ಭೂಮಿ ನೀಡಿ ಉದ್ಯೋಗ ಸಿಗದ ರೈತ ಆತ್ಮಹತ್ಯೆ; ಜಿಲ್ಲಾಡಳಿತ ವೈಫಲ್ಯದಿಂದ ಕುಟುಂಬ ಅನಾಥ

20/11/2023, 16:52

ಮೋಹನ್ ನಂಜನಗೂಡು ಮೈಸೂರು

info.reeporterkarnataka@gmail.com

ಕೈಗರಿಕಾ ಪ್ರದೇಶಕ್ಕಾಗಿ ರೈತರಿಂದ ಭೂಮಿ ಪಡೆದುಕೊಂಡು ಉದ್ಯೋಗ ನೀಡದೆ ವಂಚನೆ ಮಾಡಿರುವ ಹಿನ್ನಲೆ.ಡೆಟ್ ನೋಟ್ ಬರೆದಿಟ್ಟು ರೈತ ಯುವಕ ಆತ್ಮಹತ್ಯೆ‌ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಯುವಕ ಸಿದ್ದರಾಜು(35) ಎಂಬುವವರೆ ಮೃತ ದುರ್ದೈವಿ.


ಅಡಕನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸೇರಿದ ಮೃತ ಸಿದ್ದರಾಜು ಅವರ ಪಿತ್ರಾರ್ಜಿತ ಆಸ್ತಿಯನ್ನು ಕೆಐಎಡಿಬಿ ವಶಪಡಿಸಿಕೊಂಡು ಅದನ್ನು
ಪಾರ್ಲೆ ಆಗ್ರೋ ಇಂಡಸ್ಟ್ರೀಸ್ ಕಂಪನಿಗೆ ಹಂಚಿಕೆ ಮಾಡಿತ್ತು.
ಆದರೆ ಕೆಐಎಡಿಬಿ ಪ್ರಕಾರ ಭೂಮಿ ಕಳೆದುಕೊಂಡ ರೈತ ಅಥವಾ ರೈತ ಮಕ್ಕಳಿಗೆ ಉದ್ಯೋಗ ನೀಡಬೇಕು ಎಂಬ ನಿಯಮವಿದ್ದರೂ ಮೃತ ರೈತನ ಕುಟುಂಬಕ್ಕೆ ಕೆಐಎಡಿಬಿ ಯಾಗಲಿ ಅಥವ ರೈತರ ಜಮೀನಿನಲ್ಲಿ ಕಾರ್ಖಾನೆ ನಡೆಸುತ್ತಿರುವ ಪಾರ್ಲೆ ಆಗ್ರೋ ಇಂಡಸ್ಟ್ರೀಸ್ ಕಂಪನಿ ಯಾಗಲಿ ಮಾನವೀಯತೆ ದೃಷ್ಟಿಯಿಂದಲಾದರು ಉದ್ಯೋಗ ನೀಡದೆ ಇರುವುದು ಘಟನೆಗೆ ಕಾರಣವೆನ್ನಲಾಗಿದೆ.
ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ಕಾರ್ಖಾನೆ ಮುಂದೆ ಹಸಿರು ಸೇನೆ ಹಾಗೂ ರೈತ ಸಂಘಟನೆ ಗಳು ಕಳೆದ 45 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ಗಳನ್ನು ಸಹ ಹಮ್ಮಿಕೊಂಡಿದ್ದವು. ಆದರೂ ಉದ್ಯೋಗ ನೀಡದ ಕೆಐಎಡಿಬಿ ಹಾಗೂ ಕಾರ್ಖಾನೆಯಿಂದ ಮನನೊಂದ ರೈತ ಸಿದ್ದರಾಜು ಡೆಟ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ‌.
ಮೃತನ ಪತ್ನಿ ರಕ್ಷಿತಾ ನೀಡಿರುವ ದೂರಿನ ಮೇರೆಗೆ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳಿದ್ದಾರೆ.
ಘಟನೆಯ ಬಗ್ಗೆ ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ಕೆಐಎಡಿಬಿ ಹಾಗೂ ಕಾರ್ಖಾನೆ ಯವರ ರೈತ ವಿರೋಧಿ ನೀತಿಯನ್ನು ಖಂಡಿಸಿ ಮೃತನ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು