12:23 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ನಂಜನಗೂಡು: ಕೆಎಸ್ಸಾರ್ಟಿಸಿ- ಟಿಪ್ಪರ್ ನಡುವೆ ಓವರ್ ಟೇಕ್ ಸ್ಪರ್ಧೆ: ಬಸ್ಸಿನಲ್ಲಿದ್ದ ಮಹಿಳೆಯ ಕುತ್ತಿಗೆ ಮತ್ತು ಕೈ ಕಟ್

25/01/2025, 18:39

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಸೂರಿನಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್ ಟೇಕ್ ನಿಂದಾಗಿ ಸಾರಿಗೆ ಬಸ್ಸಿನಲ್ಲಿ ಕುಳಿತಿದ್ದ ಮಹಿಳೆಯ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ನಡೆದಿದೆ.
ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43) ಮೃತ ಮಹಿಳೆ ಎಂದು ತಿಳಿದು ಬಂದಿದೆ.
ಮೈಸೂರಿನಿಂದ -ಗುಂಡ್ಲುಪೇಟೆಗೆ ನಂಜನಗೂಡು ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್ಸಿನಲ್ಲಿ ಮೃತ ಮಹಿಳೆ ಶಿವಲಿಂಗಮ್ಮ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಸಿಂಧುವಳ್ಳಿ ಗ್ರಾಮದ ಬಳಿ ಬಸ್ಸಿನ ಕಿಟಕಿಯಿಂದ ಮಹಿಳೆ ಕತ್ತನ್ನು ಹೊರ ಹಾಕಿದ ಹಿನ್ನೆಲೆ ಟಿಪ್ಪರ್ ವಾಹನ ಮತ್ತು ಸಾರಿಗೆ ಬಸ್ ನಡುವೆ ಕ್ಷಣಾರ್ಧದಲ್ಲಿ ಅಪಘಾತ ನಡೆದಿದೆ. ಇದರ ಪರಿಣಾಮ ಬಸ್ಸಿನಲ್ಲಿ ಕುಳಿತ್ತಿದ್ದ ಶಿವಲಿಂಗಮ್ಮ ಎಂಬುವರ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.


ಅಪಘಾತಕ್ಕೆ ಕಾರಣವಾದ ಟಿಪ್ಪರ್ ವಾಹನ ಸ್ಥಳದಿಂದ ನಾಪತ್ತೆಯಾಗಿದೆ.ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದರಾಜು ಮತ್ತು ಸಿಬ್ಬಂದಿಗಳಾದ ಮಹೇಂದ್ರ ಜೊತೆಗೂಡಿ ಘಟನಾ ಸ್ಥಳವನ್ನು ಪರಿಶೀಲಿಸಿ ಸಾರಿಗೆ ಬಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಾಪತ್ತೆಯಾಗಿರುವ ಟಿಪ್ಪರ್ ವಾಹನವನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ಮೃತ ಮಹಿಳೆಯ ಶವವನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು