11:36 PM Friday6 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ನಂಜನಗೂಡು: ಕೆಎಸ್ಸಾರ್ಟಿಸಿ- ಟಿಪ್ಪರ್ ನಡುವೆ ಓವರ್ ಟೇಕ್ ಸ್ಪರ್ಧೆ: ಬಸ್ಸಿನಲ್ಲಿದ್ದ ಮಹಿಳೆಯ ಕುತ್ತಿಗೆ ಮತ್ತು ಕೈ ಕಟ್

25/01/2025, 18:39

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಸೂರಿನಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್ ಟೇಕ್ ನಿಂದಾಗಿ ಸಾರಿಗೆ ಬಸ್ಸಿನಲ್ಲಿ ಕುಳಿತಿದ್ದ ಮಹಿಳೆಯ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ನಡೆದಿದೆ.
ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43) ಮೃತ ಮಹಿಳೆ ಎಂದು ತಿಳಿದು ಬಂದಿದೆ.
ಮೈಸೂರಿನಿಂದ -ಗುಂಡ್ಲುಪೇಟೆಗೆ ನಂಜನಗೂಡು ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್ಸಿನಲ್ಲಿ ಮೃತ ಮಹಿಳೆ ಶಿವಲಿಂಗಮ್ಮ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಸಿಂಧುವಳ್ಳಿ ಗ್ರಾಮದ ಬಳಿ ಬಸ್ಸಿನ ಕಿಟಕಿಯಿಂದ ಮಹಿಳೆ ಕತ್ತನ್ನು ಹೊರ ಹಾಕಿದ ಹಿನ್ನೆಲೆ ಟಿಪ್ಪರ್ ವಾಹನ ಮತ್ತು ಸಾರಿಗೆ ಬಸ್ ನಡುವೆ ಕ್ಷಣಾರ್ಧದಲ್ಲಿ ಅಪಘಾತ ನಡೆದಿದೆ. ಇದರ ಪರಿಣಾಮ ಬಸ್ಸಿನಲ್ಲಿ ಕುಳಿತ್ತಿದ್ದ ಶಿವಲಿಂಗಮ್ಮ ಎಂಬುವರ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.


ಅಪಘಾತಕ್ಕೆ ಕಾರಣವಾದ ಟಿಪ್ಪರ್ ವಾಹನ ಸ್ಥಳದಿಂದ ನಾಪತ್ತೆಯಾಗಿದೆ.ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದರಾಜು ಮತ್ತು ಸಿಬ್ಬಂದಿಗಳಾದ ಮಹೇಂದ್ರ ಜೊತೆಗೂಡಿ ಘಟನಾ ಸ್ಥಳವನ್ನು ಪರಿಶೀಲಿಸಿ ಸಾರಿಗೆ ಬಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಾಪತ್ತೆಯಾಗಿರುವ ಟಿಪ್ಪರ್ ವಾಹನವನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ಮೃತ ಮಹಿಳೆಯ ಶವವನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು