9:10 PM Thursday10 - April 2025
ಬ್ರೇಕಿಂಗ್ ನ್ಯೂಸ್
ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್…

ಇತ್ತೀಚಿನ ಸುದ್ದಿ

ನಂಜನಗೂಡು: ಲಿಟಲ್ ಚಾಂಪ್ಸ್ ಗುರುಕುಲ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ.

26/08/2024, 17:36

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಪಟ್ಟಣದ ಒಕ್ಕಲಗೇರಿಯಲ್ಲಿರುವ ಗುರುಕುಲ ಟ್ರಸ್ಟ್ ವತಿಯಿಂದ ಲಿಟಲ್ ಚಾಂಪ್ಸ್ ಗುರುಕುಲ ಶಾಲೆಯಲ್ಲಿ ಇಂದು ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಶಾಲೆಯನ್ನು ಬಣ್ಣ ಬಣ್ಣದ ಹೂಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು
ದಳವಾಯಿ ಪ್ರೌಢಶಾಲೆಯ ಪ್ರಾಧ್ಯಾಪಕರಾದ ಲಲಿತಾ ಮತ್ತು ಶಾಲಾ ಮುಖ್ಯಸ್ಥರಿಂದ ಕೃಷ್ಣನ ವಿಗ್ರಹಕ್ಕೆ ಪೂಜೆ ಸಲ್ಲಿಸಿ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಕಿ ಲಲಿತ ಮಾತನಾಡಿ, ಮಕ್ಕಳು ಎಳೆಯ ವಯಸ್ಸಿನಿಂದಲೇ ನಯ, ವಿನಯ, ಗುರು ಹಿರಿಯರಿಗೆ ಗೌರವ ನೀಡುವುದರ ಜೊತೆಗೆ ತಮಗೆ ಸಹಾಯ ಹಾಗೂ ಒಳ್ಳೆಯದನ್ನು ಮಾಡಿದವರಿಗೆ ಕೃತಜ್ಞತೆ ತಿಳಿಸುವುದು ಹಾಗೆಯೇ ತಪ್ಪು ಮಾಡಿದರೆ ಕ್ಷಮೆ ಕೇಳುವುದನ್ನು ಕಲಿಯಬೇಕು ದೇವರ ಆಶೀರ್ವಾದದ ಜೊತೆಗೆ ಗುರು ಹಿರಿಯರ ಆಶೀರ್ವಾದವು ಬೇಕು. ಇದರಿಂದ ನಿಮ್ಮ ಭವಿಷ್ಯ ಉಜ್ವಲವಾಗುತ್ತದೆ ಎಂದು ತಿಳಿಸುತ್ತಾ ಕೃಷ್ಣನ ಗೀತೆ ಹಾಡುವ ಮೂಲಕ ಮಕ್ಕಳಿಗೆ ಶುಭ ಹಾರೈಸಿದರು.
ಇದೇ ಸಂದರ್ಭ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.


ಶಾಲಾ ಮುಖ್ಯ ಶಿಕ್ಷಕಿ ರಜನಿ ರವಿ ಮಾತನಾಡಿ ನಮ್ಮ ಅತ್ತೆ ಮಾವ ಸೇರಿದಂತೆ ನಮ್ಮ ಮನೆಯವರು ಹಾಗೂ ನಮ್ಮ ಶಾಲಾ ಶಿಕ್ಷಕರ ತಂಡ ಮತ್ತು ಎಲ್ಲಾ ಪೋಷಕರ ಸಹಕಾರದಿಂದ ಕಳೆದ 11 ವರ್ಷಗಳಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಮುಂದೆಯೂ ತಮ್ಮ ಸಹಕಾರ ಹೀಗೆ ಇರಲಿ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಬಳಿಕ ಚಾಕಲೇಟ್ ತುಂಬಿದ ಮಡಕೆ ಒಡೆಯುವ ಮೂಲಕ ಮಕ್ಕಳಿಗೆ ಮನರಂಜನೆ ನೀಡಲಾಯಿತು.
ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಎಲ್ಲ ಪುಟಾಣಿಗಳಿಗೂ ಬಹುಮಾನ ವಿತರಣೆ ಮಾಡಲಾಯಿತು.
ಶಾಲೆಯ ಪುಟ್ಟ ಪುಟ್ಟ ಮಕ್ಕಳು ಕೃಷ್ಣ , ರುಕ್ಮಿಣಿ, ರಾಧೆಯರ ವೇಷಧಾರಿಗಳಾಗಿ ಮಿಂಚುತ್ತಾ ಪೋಷಕರ ಮನಸೂರೆ ಗೊಂಡರು.
ಕಾರ್ಯಕ್ರಮದಲ್ಲಿ ಶಾಲಾ ಸಂಸ್ಥಾಪಕರಾದ ಶ್ರೀಕಂಠಯ್ಯ, ರವಿ ಶ್ರೀಕಂಠಯ್ಯ, ರಜನಿ ರವಿ ಸೇರಿದಂತೆ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು