6:34 PM Friday30 - January 2026
ಬ್ರೇಕಿಂಗ್ ನ್ಯೂಸ್
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್

ಇತ್ತೀಚಿನ ಸುದ್ದಿ

ನಂಜನಗೂಡು: ಲಿಟಲ್ ಚಾಂಪ್ಸ್ ಗುರುಕುಲ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ.

26/08/2024, 17:36

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಪಟ್ಟಣದ ಒಕ್ಕಲಗೇರಿಯಲ್ಲಿರುವ ಗುರುಕುಲ ಟ್ರಸ್ಟ್ ವತಿಯಿಂದ ಲಿಟಲ್ ಚಾಂಪ್ಸ್ ಗುರುಕುಲ ಶಾಲೆಯಲ್ಲಿ ಇಂದು ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಶಾಲೆಯನ್ನು ಬಣ್ಣ ಬಣ್ಣದ ಹೂಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು
ದಳವಾಯಿ ಪ್ರೌಢಶಾಲೆಯ ಪ್ರಾಧ್ಯಾಪಕರಾದ ಲಲಿತಾ ಮತ್ತು ಶಾಲಾ ಮುಖ್ಯಸ್ಥರಿಂದ ಕೃಷ್ಣನ ವಿಗ್ರಹಕ್ಕೆ ಪೂಜೆ ಸಲ್ಲಿಸಿ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಕಿ ಲಲಿತ ಮಾತನಾಡಿ, ಮಕ್ಕಳು ಎಳೆಯ ವಯಸ್ಸಿನಿಂದಲೇ ನಯ, ವಿನಯ, ಗುರು ಹಿರಿಯರಿಗೆ ಗೌರವ ನೀಡುವುದರ ಜೊತೆಗೆ ತಮಗೆ ಸಹಾಯ ಹಾಗೂ ಒಳ್ಳೆಯದನ್ನು ಮಾಡಿದವರಿಗೆ ಕೃತಜ್ಞತೆ ತಿಳಿಸುವುದು ಹಾಗೆಯೇ ತಪ್ಪು ಮಾಡಿದರೆ ಕ್ಷಮೆ ಕೇಳುವುದನ್ನು ಕಲಿಯಬೇಕು ದೇವರ ಆಶೀರ್ವಾದದ ಜೊತೆಗೆ ಗುರು ಹಿರಿಯರ ಆಶೀರ್ವಾದವು ಬೇಕು. ಇದರಿಂದ ನಿಮ್ಮ ಭವಿಷ್ಯ ಉಜ್ವಲವಾಗುತ್ತದೆ ಎಂದು ತಿಳಿಸುತ್ತಾ ಕೃಷ್ಣನ ಗೀತೆ ಹಾಡುವ ಮೂಲಕ ಮಕ್ಕಳಿಗೆ ಶುಭ ಹಾರೈಸಿದರು.
ಇದೇ ಸಂದರ್ಭ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.


ಶಾಲಾ ಮುಖ್ಯ ಶಿಕ್ಷಕಿ ರಜನಿ ರವಿ ಮಾತನಾಡಿ ನಮ್ಮ ಅತ್ತೆ ಮಾವ ಸೇರಿದಂತೆ ನಮ್ಮ ಮನೆಯವರು ಹಾಗೂ ನಮ್ಮ ಶಾಲಾ ಶಿಕ್ಷಕರ ತಂಡ ಮತ್ತು ಎಲ್ಲಾ ಪೋಷಕರ ಸಹಕಾರದಿಂದ ಕಳೆದ 11 ವರ್ಷಗಳಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಮುಂದೆಯೂ ತಮ್ಮ ಸಹಕಾರ ಹೀಗೆ ಇರಲಿ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಬಳಿಕ ಚಾಕಲೇಟ್ ತುಂಬಿದ ಮಡಕೆ ಒಡೆಯುವ ಮೂಲಕ ಮಕ್ಕಳಿಗೆ ಮನರಂಜನೆ ನೀಡಲಾಯಿತು.
ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಎಲ್ಲ ಪುಟಾಣಿಗಳಿಗೂ ಬಹುಮಾನ ವಿತರಣೆ ಮಾಡಲಾಯಿತು.
ಶಾಲೆಯ ಪುಟ್ಟ ಪುಟ್ಟ ಮಕ್ಕಳು ಕೃಷ್ಣ , ರುಕ್ಮಿಣಿ, ರಾಧೆಯರ ವೇಷಧಾರಿಗಳಾಗಿ ಮಿಂಚುತ್ತಾ ಪೋಷಕರ ಮನಸೂರೆ ಗೊಂಡರು.
ಕಾರ್ಯಕ್ರಮದಲ್ಲಿ ಶಾಲಾ ಸಂಸ್ಥಾಪಕರಾದ ಶ್ರೀಕಂಠಯ್ಯ, ರವಿ ಶ್ರೀಕಂಠಯ್ಯ, ರಜನಿ ರವಿ ಸೇರಿದಂತೆ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು