5:33 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ನಂಜನಗೂಡು: ಲಿಟಲ್ ಚಾಂಪ್ಸ್ ಗುರುಕುಲ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ.

26/08/2024, 17:36

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಪಟ್ಟಣದ ಒಕ್ಕಲಗೇರಿಯಲ್ಲಿರುವ ಗುರುಕುಲ ಟ್ರಸ್ಟ್ ವತಿಯಿಂದ ಲಿಟಲ್ ಚಾಂಪ್ಸ್ ಗುರುಕುಲ ಶಾಲೆಯಲ್ಲಿ ಇಂದು ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಶಾಲೆಯನ್ನು ಬಣ್ಣ ಬಣ್ಣದ ಹೂಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು
ದಳವಾಯಿ ಪ್ರೌಢಶಾಲೆಯ ಪ್ರಾಧ್ಯಾಪಕರಾದ ಲಲಿತಾ ಮತ್ತು ಶಾಲಾ ಮುಖ್ಯಸ್ಥರಿಂದ ಕೃಷ್ಣನ ವಿಗ್ರಹಕ್ಕೆ ಪೂಜೆ ಸಲ್ಲಿಸಿ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಕಿ ಲಲಿತ ಮಾತನಾಡಿ, ಮಕ್ಕಳು ಎಳೆಯ ವಯಸ್ಸಿನಿಂದಲೇ ನಯ, ವಿನಯ, ಗುರು ಹಿರಿಯರಿಗೆ ಗೌರವ ನೀಡುವುದರ ಜೊತೆಗೆ ತಮಗೆ ಸಹಾಯ ಹಾಗೂ ಒಳ್ಳೆಯದನ್ನು ಮಾಡಿದವರಿಗೆ ಕೃತಜ್ಞತೆ ತಿಳಿಸುವುದು ಹಾಗೆಯೇ ತಪ್ಪು ಮಾಡಿದರೆ ಕ್ಷಮೆ ಕೇಳುವುದನ್ನು ಕಲಿಯಬೇಕು ದೇವರ ಆಶೀರ್ವಾದದ ಜೊತೆಗೆ ಗುರು ಹಿರಿಯರ ಆಶೀರ್ವಾದವು ಬೇಕು. ಇದರಿಂದ ನಿಮ್ಮ ಭವಿಷ್ಯ ಉಜ್ವಲವಾಗುತ್ತದೆ ಎಂದು ತಿಳಿಸುತ್ತಾ ಕೃಷ್ಣನ ಗೀತೆ ಹಾಡುವ ಮೂಲಕ ಮಕ್ಕಳಿಗೆ ಶುಭ ಹಾರೈಸಿದರು.
ಇದೇ ಸಂದರ್ಭ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.


ಶಾಲಾ ಮುಖ್ಯ ಶಿಕ್ಷಕಿ ರಜನಿ ರವಿ ಮಾತನಾಡಿ ನಮ್ಮ ಅತ್ತೆ ಮಾವ ಸೇರಿದಂತೆ ನಮ್ಮ ಮನೆಯವರು ಹಾಗೂ ನಮ್ಮ ಶಾಲಾ ಶಿಕ್ಷಕರ ತಂಡ ಮತ್ತು ಎಲ್ಲಾ ಪೋಷಕರ ಸಹಕಾರದಿಂದ ಕಳೆದ 11 ವರ್ಷಗಳಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಮುಂದೆಯೂ ತಮ್ಮ ಸಹಕಾರ ಹೀಗೆ ಇರಲಿ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಬಳಿಕ ಚಾಕಲೇಟ್ ತುಂಬಿದ ಮಡಕೆ ಒಡೆಯುವ ಮೂಲಕ ಮಕ್ಕಳಿಗೆ ಮನರಂಜನೆ ನೀಡಲಾಯಿತು.
ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಎಲ್ಲ ಪುಟಾಣಿಗಳಿಗೂ ಬಹುಮಾನ ವಿತರಣೆ ಮಾಡಲಾಯಿತು.
ಶಾಲೆಯ ಪುಟ್ಟ ಪುಟ್ಟ ಮಕ್ಕಳು ಕೃಷ್ಣ , ರುಕ್ಮಿಣಿ, ರಾಧೆಯರ ವೇಷಧಾರಿಗಳಾಗಿ ಮಿಂಚುತ್ತಾ ಪೋಷಕರ ಮನಸೂರೆ ಗೊಂಡರು.
ಕಾರ್ಯಕ್ರಮದಲ್ಲಿ ಶಾಲಾ ಸಂಸ್ಥಾಪಕರಾದ ಶ್ರೀಕಂಠಯ್ಯ, ರವಿ ಶ್ರೀಕಂಠಯ್ಯ, ರಜನಿ ರವಿ ಸೇರಿದಂತೆ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು