4:14 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ನಂಜನಗೂಡು: ಲೋಕಾಯುಕ್ತರಿಂದ ಸಾರ್ವಜನಿಕರ ಕುಂದು ಕೊರತೆ ಸಭೆ ಮತ್ತು ದೂರು ಸ್ವೀಕಾರ

10/01/2024, 22:31

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ಅವರ ಅಧ್ಯಕ್ಷತೆಯಲ್ಲಿ ಇಂದು ಸಾರ್ವಜನಿಕರ ಕುಂದು ಕೊರತೆ ಸಭೆ ಹಾಗೂ ದೂರು ಸ್ವೀಕಾರ ಕಾರ್ಯಕ್ರಮವನ್ನು ನಂಜನಗೂಡಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮೊದಲಿಗೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಅಧಿಕಾರಿಗಳು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಕಾರಣವಿಲ್ಲದೆ ವಿಳಂಬ ಮಾಡುವುದಾಗಲಿ ಕಚೇರಿಯಿಂದ ಕಚೇರಿಗೆ ಅಲೆಸುವುದಾಗಲಿ ಮಾಡದೆ ಪ್ರಾಮಾಣಿಕವಾಗಿ ಮಾಡಿಕೊಡಬೇಕು ಎಂದು ಎಚ್ಚರಿಸಿದರು.


ಸಾರ್ವಜನಿಕರು ಏನಾದರೂ ನಮಗೆ ದೂರು ನೀಡಿದರೆ ನಿಮಗೆ ಖಂಡಿತ ತೊಂದರೆಯಾಗುತ್ತದೆ. ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಅಧಿಕಾರಿಗಳಿಗೆ ಸಾರ್ವಜನಿಕರ ಪರವಾಗಿ ಚಾಟಿ ಬೀಸಿದರು.
ಬಳಿಕ ಸಾರ್ವಜನಿಕರು ನೀಡಿದ ದೂರುಗಳನ್ನು ಸ್ವೀಕರಿಸಿ ಅವರ ಅಹವಾಲುಗಳನ್ನು ಕೇಳಿ ತಿಳಿದುಕೊಂಡು ಸ್ಥಳದಲ್ಲೇ ಇದ್ದ ಅಧಿಕಾರಿಗಳ ಮುಖಾಂತರ ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ ನೀಡಿದರು.
ಜಮೀನುಗಳಿಗೆ ತೆರಳುವ ಸರ್ಕಾರಿ ಓಣಿ ಒತ್ತುವರಿ, ನಿವೇಶನಗಳ ಒತ್ತುವರಿ, ಆಶ್ರಯ ಮನೆಗಳಿಗೆ ಬಿಲ್ ಆಗದೇ ಇರುವುದು, ನಗರ ಸಭೆಯಲ್ಲಿ ಕಡತನಾಪತ್ತೆ ಹಾಗೂ ಖಾತೆ ಮಾಡಿಕೊಡುವುದರಲ್ಲಿ ಅಕ್ರಮ ವೆಸಗಿರುವ ಬಗ್ಗೆ ಸೇರಿದಂತೆ ಹಲವು ಸಾರ್ವಜನಿಕ ಕುಂದು ಕೊರತೆಗಳ ಬಗ್ಗೆ ವಿಚಾರಣೆ ನಡೆಸಿ ಅವುಗಳನ್ನು ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಇದೇ ಸಂದರ್ಭ ಇಲಾಖಾವಾರು ಸರ್ಕಾರದ ಜನಪ್ರಿಯ ಯೋಜನೆಗಳಲ್ಲೊಂದಾದ ಸಕಾಲದಲ್ಲಿ ವಿಲೇವಾರಿ ಆಗದಿರುವ ಅರ್ಜಿಗಳ ಬಗ್ಗೆ ಪ್ರಶ್ನಿಸಿ ಅವುಗಳನ್ನು ಕೂಡಲೇ ಇತ್ಯರ್ಥ ಪಡಿಸುವಂತೆಯೂ ಅಧಿಕಾರಿಗಳಿಗೆ ತಿಳಿಸಿದರು.
ಸರ್ಕಾರಿ ಕಚೇರಿ ಹಾಗೂ ಅಧಿಕಾರಿಗಳಿಂದ ಯಾವುದೇ ತೊಂದರೆ ಹಾಗೂ ವಿಳಂಬವಾಗಲಿ ನಮಗೆ ದೂರು ನೀಡಿ ಎಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿಕೊಂಡರು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶಿವಕುಮಾರ್ ಕಾಸನೂರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಜೆರಾಲ್ಡ್, ಲೋಕಾಯುಕ್ತ ಪೊಲೀಸ್ ನಿರೀಕ್ಷಕರುಗಳಾದ ಉಮೇಶ್, ಲೋಕೇಶ್, ರೂಪಶ್ರೀ, ರವಿಕುಮಾರ್ ಸಿಬ್ಬಂದಿಗಳಾದ ಗುರುಪ್ರಸಾದ್, ಮೋಹನ್ ಕುಮಾರ್, ಕಾಂತರಾಜು, ನೇತ್ರಾವತಿ ,ಶೇಖರ್, ಪರಶುರಾಮ್, ದಿನೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು