1:35 AM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

ನಂಜನಗೂಡು: ಮಾಜಿ ಸಂಸದ, ದಿವಂಗತ ಧ್ರುವನಾರಾಯಣ್ ಅಭಿಮಾನಿ ಬಳಗದ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ

09/03/2024, 20:51

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದೇಶದ ಉತ್ತಮ ಸಂಸದ ಪಟು ಎಂದೆ ಖ್ಯಾತಿ ಪಡೆದಿದ್ದ ಮಾಜಿ ಸಂಸದ ದ್ರುವನಾರಾಯಣ್ ಅವರ ಮೊದಲನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ನಂಜನಗೂಡಿನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಂಜುನಾಥ್ ತಿಳಿಸಿದರು.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಧ್ರುವನಾರಾಯಣ್ ಅವರು ಕಾಲವಾಗಿ ಒಂದು ವರ್ಷ ಕಳೆದ ಹಿನ್ನೆಲೆ ಅವರ ಸ್ಮರಣಾರ್ಥ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ ಮೈಸೂರು, ದೃವನಾರಾಯಣ್ ಅಭಿಮಾನಿ ಬಳಗ ನಂಜನಗೂಡು, ಲಯನ್ಸ್ ಸಂಸ್ಥೆ ಮತ್ತು ಅರವಿಂದ ಕಣ್ಣಿನ ಆಸ್ಪತ್ರೆ ಕೊಯಮತ್ತೂರು ಇವರ ಸಯುಕ್ತ ಆಶ್ರಯದಲ್ಲಿ ಉಚಿತ ಬೃಹತ್ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದರು.
ಶಿಬಿರದಲ್ಲಿ ಕಣ್ಣಿಗೆ ಸಂಬಂಧ ಪಟ್ಟ ಎಲ್ಲಾ ಕಾಯಿಲೆಗಳನ್ನು ಪರೀಕ್ಷಿಸಿ ಅಗತ್ಯವಿದ್ದಲ್ಲಿ ರೋಗಿಗಳಿಗೆ ಉಚಿತ ಶಸ್ತ್ರಚಿಕಿತ್ಸೆಯನ್ನು ಮಾಡಿಸಲಾಗುವುದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಶಾಸಕ ದರ್ಶನ್ ದ್ರುವ ನಾರಾಯಣ್ ಮಾಜಿ ಶಾಸಕ ಕಳೆದೆ ಕೇಶವಮೂರ್ತಿ ಕೆಪಿಸಿಸಿ ಕಾರ್ಯದರ್ಶಿಗಳಾದ ಶ್ರೀಕಂಠ ಮತ್ತು ಕಾವೇರಪ್ಪ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಲಯನ್ ಸಂಸ್ಥೆ ಅಧ್ಯಕ್ಷ ಗೋಪಾಲಕೃಷ್ಣ ಕಾರ್ಯದರ್ಶಿ ನಾಗರಾಜ್ ಖಜಾಂಚಿ ಉಮೇಶ್ ಮುಖಂಡರುಗಳಾದ ಶ್ರೀನಿವಾಸ ಮೂರ್ತಿ ವಿಜಯ್ ಕುಮಾರ್ ನಾಗರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು