1:36 AM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ನಂಜನಗೂಡು: ಮದ್ಯದ ಅಂಗಡಿ ವಿರೋಧಿಸಿ ಬಾರಿ ಪ್ರತಿಭಟನೆ; ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ

21/11/2023, 18:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಭಾರಿ ವಿರೋಧದ ನಡುವೆ ತಲೆ ಎತ್ತಿರುವ ನೂತನ ಮದ್ಯದ ಅಂಗಡಿ ಮುಚ್ಚುವಂತೆ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಮದ್ಯದ ಅಂಗಡಿ ಮುಂಭಾಗದಲ್ಲಿ ಕುಳಿತು ಧಿಕ್ಕಾರದ ಘೋಷಣೆಗಳನ್ನು ಕೂಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದ ಎಲ್ಲ ಕೋಮಿನ ಯಜಮಾನರು, ಮುಖಂಡರು ಸಾರ್ವಜನಿಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಗ್ರಾಮದ ಸಿದ್ದಯ್ಯನ ಹುಂಡಿ ವೃತ್ತದಲ್ಲಿ ನೂತನ ಮದ್ಯದ ಅಂಗಡಿ ತೆರೆಯಲಾಗಿದೆ. ಮಹಿಳೆಯರು ಮಕ್ಕಳು ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳು ವಾಸಿಸುವ ಸಮೀಪದಲ್ಲಿ ಮದ್ಯದ ಅಂಗಡಿ ತೆರೆದಿರುವುದು ಅಕ್ಷಮ್ಯ ಅಪರಾಧ. ಇದರಿಂದಾಗಿ ಕಸುವಿನಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮಸ್ಥರು ಕುಡಿತದ ಚಟಕ್ಕೆ ಬಲಿಯಾಗಿ ಅಶಾಂತಿ ವಾತಾವರಣ ನಿರ್ಮಾಣವಾಗುವುದರಲ್ಲಿ ಅನುಮಾನವೇ ಇಲ್ಲ.


ಎಲ್ಲಾ ವರ್ಗದ ಜನರು ಅಣ್ಣ-ತಮ್ಮಂದಿರ ರೀತಿಯಲ್ಲಿ ಶಾಂತಿಯುತವಾಗಿ ಬದುಕು ಸಾಗಿಸುತ್ತಿದ್ದೇವೆ.ಇಂತಹ ಸ್ಥಳದಲ್ಲಿ ಮದ್ಯದ ಅಂಗಡಿ ಸ್ಥಾಪನೆಗೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ.
ಕೂಡಲೇ ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ನಂಜನಗೂಡಿನ ತಾಲೂಕು ಆಡಳಿತ ಎಚ್ಚೆತ್ತು ಪ್ರಾರಂಭವಾಗಿರುವ ಮಧ್ಯದ ಅಂಗಡಿಯನ್ನ ತೆರವು ಮಾಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಹಸುವಿನಹಳ್ಳಿ ಗ್ರಾಮದ ಗೌಡಿಕೆ ಯಜಮಾನರಾದ ಕೆ.ಎಂ. ಶಿವಮೂರ್ತಿ, ಶಿವಪ್ಪ , ಗ್ರಾಪಂ ಅಧ್ಯಕ್ಷರಾದ ಮಂಜುಳಾ ದೊರೆಸ್ವಾಮಿ, ಮಹದೇವಸ್ವಾಮಿ , ಮಹದೇವ ಸೇರಿದಂತೆ ನೂರಾರು ಮುಖಂಡರು ಸಾರ್ವಜನಿಕರು ಗ್ರಾಮಸ್ಥರು ಸಂಘ ಸಂಸ್ಥೆಯ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು