3:31 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ನಂಜನಗೂಡು: ಮಹಿಳೆಯರಿಗೆ ಪರಿಕರಗಳ ವಿತರಿಸಿದ ತಹಶೀಲ್ದಾರ್

01/11/2024, 23:41

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ಸಭಾಂಗಣದಲ್ಲಿ ಐಟಿಸಿ ಮತ್ತು ಬಂಧನ್ ಕೊನ್ನಗರ್ ಟಿಎಚ್ ಪಿ ವತಿಯಿಂದ ಆಯೋಜಿಸಿದ್ದ ಮಹಿಳೆಯರಿಗೆ ಉಚಿತ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ತಹಶೀಲ್ದಾರ್ ಗ್ರೇಡ್ 2 ಮಹೇಶ್ ಪಾಟೀಲ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ವಾಸಿಸುವ ಜನರಿಗೆ ಉದ್ಯೋಗವಕಾಶಗಳನ್ನು ನೀಡಬೇಕು ಹಾಗಾಗಿ
ಐಟಿಸಿ ಮತ್ತು ಬಂಧನ್ ಕೊನ್ನಗರ್ ಸಂಸ್ಥೆಯವರು ಬಡತನದಲ್ಲಿರುವ ಮಹಿಳೆಯರನ್ನು ಗುರುತಿಸಿ ಅವರಿಗೆ ಸ್ವಾವಲಂಬಿ ಜೀವನವನ್ನು ನಡೆಸಲು ಟೈಲರಿಂಗ್ ತರಬೇತಿಯನ್ನು ನೀಡಿ, ಹೊಲಿಗೆ ಯಂತ್ರ, ತಳ್ಳುವ ಗಾಡಿ, ದಿನಸಿ ಅಂಗಡಿಗೆ ಬೇಕಾದ ದವಸ ಧಾನ್ಯಗಳ ವಸ್ತುಗಳು, ಪಾತ್ರೆ ಅಂಗಡಿಗೆ ಬೇಕಾದ ಪಾತ್ರೆಗಳ ಸಾಮಗ್ರಿಗಳು ಸೇರಿದಂತೆ ವಿವಿಧ ಬಗೆಯ ಪರಿಕರಗಳನ್ನು ಮಹಿಳೆಯರಿಗೆ ನೀಡಿ ಅವರ ಬದುಕಿಗೆ ಆಶ್ರಯವಾಗುತ್ತಿದ್ದಾರೆ. ಮಹಿಳೆಯರು ಇದರ ಸದುಪಯೋಗವನ್ನು ಪಡಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಮಹಿಳೆಯರು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಬೇಕು. ನೀವು ಕಲಿತ ಕೆಲಸವನ್ನು ಇನ್ನೊಬ್ಬರಿಗೆ ಹೇಳಿಕೊಂಡು ಅವರಿಗೂ ಆಶ್ರಯ ನೀಡಬೇಕು ಎಂದು ತಿಳಿಸಿದರು.
ಸುಮಾರು 50ಕ್ಕೂ ಹೆಚ್ಚು ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ರೆಡಿಮೇಡ್ ಉಡುಪುಗಳು, ಸೌಂದರ್ಯ ವರ್ಧಕಗಳು, ದಿನಸಿ ವಸ್ತುಗಳು, ಬ್ಯಾಗ್ ಮೇಕಿಂಗ್, ಪಾಸ್ಟ್ ಫುಡ್, ತಳ್ಳುವ ಗಾಡಿ, ಪಾತ್ರೆ ಸೇರಿದಂತೆ ವಿವಿಧ ಪರಿಕರಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಐಟಿಸಿ ಸಂಸ್ಥೆಯ ಮುಖ್ಯಸ್ಥರಾದ ವಿಜಯ್ ಸಿಂಗ್, ಕಾರ್ಯನಿರ್ವಾಹಕ ಅಧಿಕಾರಿ ಮಂಜು, ಹಿರಿಯ ಮೇಲ್ವಿಚಾರಕರಾದ ಮನೋಜ್, ಹದಿನಾರು ಗ್ರಾಪಂ ಅಧ್ಯಕ್ಷೆ ಸಣ್ಣತಾಯಮ್ಮ, ಬಿಳಿಗೆರೆ ಗ್ರಾ.ಪಂ ಅಧ್ಯಕ್ಷೆ ರಾಜಮ್ಮ, ಕೆಂಪಿಸಿದ್ದನಹುಂಡಿ ಗ್ರಾಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ, ಮುಖಂಡ ಪುನೀತ್ ಕುಮಾರ್, ಬಂಧನ್ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ದೀಪಕ್ ದಾಸ್, ಸಮುದಾಯ ಅಧಿಕಾರಿ ಮಂಜುನಾಥ್, ಸಂಯೋಜಕ ಮುಸ್ತಕಿನ್ ಸೇರಿದಂತೆ ಮಹಿಳೆಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು