5:43 AM Thursday6 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ನಂಜನಗೂಡು: ಮಹಿಳೆಯರಿಗೆ ಪರಿಕರಗಳ ವಿತರಿಸಿದ ತಹಶೀಲ್ದಾರ್

01/11/2024, 23:41

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ಸಭಾಂಗಣದಲ್ಲಿ ಐಟಿಸಿ ಮತ್ತು ಬಂಧನ್ ಕೊನ್ನಗರ್ ಟಿಎಚ್ ಪಿ ವತಿಯಿಂದ ಆಯೋಜಿಸಿದ್ದ ಮಹಿಳೆಯರಿಗೆ ಉಚಿತ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ತಹಶೀಲ್ದಾರ್ ಗ್ರೇಡ್ 2 ಮಹೇಶ್ ಪಾಟೀಲ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ವಾಸಿಸುವ ಜನರಿಗೆ ಉದ್ಯೋಗವಕಾಶಗಳನ್ನು ನೀಡಬೇಕು ಹಾಗಾಗಿ
ಐಟಿಸಿ ಮತ್ತು ಬಂಧನ್ ಕೊನ್ನಗರ್ ಸಂಸ್ಥೆಯವರು ಬಡತನದಲ್ಲಿರುವ ಮಹಿಳೆಯರನ್ನು ಗುರುತಿಸಿ ಅವರಿಗೆ ಸ್ವಾವಲಂಬಿ ಜೀವನವನ್ನು ನಡೆಸಲು ಟೈಲರಿಂಗ್ ತರಬೇತಿಯನ್ನು ನೀಡಿ, ಹೊಲಿಗೆ ಯಂತ್ರ, ತಳ್ಳುವ ಗಾಡಿ, ದಿನಸಿ ಅಂಗಡಿಗೆ ಬೇಕಾದ ದವಸ ಧಾನ್ಯಗಳ ವಸ್ತುಗಳು, ಪಾತ್ರೆ ಅಂಗಡಿಗೆ ಬೇಕಾದ ಪಾತ್ರೆಗಳ ಸಾಮಗ್ರಿಗಳು ಸೇರಿದಂತೆ ವಿವಿಧ ಬಗೆಯ ಪರಿಕರಗಳನ್ನು ಮಹಿಳೆಯರಿಗೆ ನೀಡಿ ಅವರ ಬದುಕಿಗೆ ಆಶ್ರಯವಾಗುತ್ತಿದ್ದಾರೆ. ಮಹಿಳೆಯರು ಇದರ ಸದುಪಯೋಗವನ್ನು ಪಡಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಮಹಿಳೆಯರು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಬೇಕು. ನೀವು ಕಲಿತ ಕೆಲಸವನ್ನು ಇನ್ನೊಬ್ಬರಿಗೆ ಹೇಳಿಕೊಂಡು ಅವರಿಗೂ ಆಶ್ರಯ ನೀಡಬೇಕು ಎಂದು ತಿಳಿಸಿದರು.
ಸುಮಾರು 50ಕ್ಕೂ ಹೆಚ್ಚು ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ರೆಡಿಮೇಡ್ ಉಡುಪುಗಳು, ಸೌಂದರ್ಯ ವರ್ಧಕಗಳು, ದಿನಸಿ ವಸ್ತುಗಳು, ಬ್ಯಾಗ್ ಮೇಕಿಂಗ್, ಪಾಸ್ಟ್ ಫುಡ್, ತಳ್ಳುವ ಗಾಡಿ, ಪಾತ್ರೆ ಸೇರಿದಂತೆ ವಿವಿಧ ಪರಿಕರಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಐಟಿಸಿ ಸಂಸ್ಥೆಯ ಮುಖ್ಯಸ್ಥರಾದ ವಿಜಯ್ ಸಿಂಗ್, ಕಾರ್ಯನಿರ್ವಾಹಕ ಅಧಿಕಾರಿ ಮಂಜು, ಹಿರಿಯ ಮೇಲ್ವಿಚಾರಕರಾದ ಮನೋಜ್, ಹದಿನಾರು ಗ್ರಾಪಂ ಅಧ್ಯಕ್ಷೆ ಸಣ್ಣತಾಯಮ್ಮ, ಬಿಳಿಗೆರೆ ಗ್ರಾ.ಪಂ ಅಧ್ಯಕ್ಷೆ ರಾಜಮ್ಮ, ಕೆಂಪಿಸಿದ್ದನಹುಂಡಿ ಗ್ರಾಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ, ಮುಖಂಡ ಪುನೀತ್ ಕುಮಾರ್, ಬಂಧನ್ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ದೀಪಕ್ ದಾಸ್, ಸಮುದಾಯ ಅಧಿಕಾರಿ ಮಂಜುನಾಥ್, ಸಂಯೋಜಕ ಮುಸ್ತಕಿನ್ ಸೇರಿದಂತೆ ಮಹಿಳೆಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು