4:36 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ನಂಜನಗೂಡು: ಮನೆ ಮೇಲೆ ಮರ ಬಿದ್ದು ಸಂಪೂರ್ಣ ಜಖಂ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಬಡ ಕುಟುಂಬ ಪಾರು

16/05/2024, 22:45

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಿಂದಾಗಿ ಹಳೆಯ ಬಾರಿ ಗಾತ್ರದ ಅರಳಿ ಮರವೊಂದು ಮನೆ ಮೇಲೆ ಬಿದ್ದು ಮನೆ ಸಂಪೂರ್ಣ ನಜ್ಜು ಗುಜ್ಜಾಗಿದ್ದು ಅದೃಷ್ಟವಶಾತ್ ಕೂದಲೆಳೆಯ ಅಂತರದಲ್ಲಿ ಬಡ ಕುಟುಂಬವೊಂದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಂಜನಗೂಡು ತಾಲೂಕಿನ ಅರಿಯೂರು ಗ್ರಾಮದಲ್ಲಿ ನಡೆದಿದೆ.
ಮಳೆ ಗಾಳಿಯಿಂದಾಗಿ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಇದ್ದಕ್ಕಿದ್ದಂತೆ ಮರದ ಬಾರಿ ಗಾತ್ರದ ಕೊಂಬೆಯೊಂದು ಮನೆಯ ಮೇಲೆ ಬೀಳುತ್ತಿದ್ದಂತೆ ಇಬ್ಬರು ಮಕ್ಕಳು ಸೇರಿದಂತೆ ವಯೋವೃದ್ದಾದಿಯಾಗಿ ಮನೆಯಿಂದ ಹೊರ ಬಂದು ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಆದರೆ ಮನೆ ಮಾತ್ರ ಸಂಪೂರ್ಣ ಜಖಂ ಗೊಂಡಿದೆ.
ಸುಮಾರು 90 ವರ್ಷದ ವಯೋ ವೃದ್ಧ ವೆಂಕಟಯ್ಯ ಆತನ ಪತ್ನಿ ಹಾಗೂ ಮೊಮ್ಮಗಳಾದ ಪದ್ಮ ಮತ್ತು ಅವಳ ಎರಡು ಮಕ್ಕಳು ಮನೆಯಲ್ಲಿ ವಾಸವಾಗಿದ್ದರು.
ಕಡು ಬಡವರಾದ ವೆಂಕಟಯ್ಯ ಕುಟುಂಬ ಒಂದು ಸಣ್ಣ ಮನೆಯಲ್ಲಿ ವಾಸವಿರುತ್ತಾರೆ. ಅದೇ ಸಣ್ಣ ಮನೆಯಲ್ಲಿ ಮೊಮ್ಮಗಳು ಪದ್ಮ ಜೀವನೋಪಾಯಕ್ಕಾಗಿ ಸಾಲ ಸೋಲ ಮಾಡಿ ಒಂದು ಪುಟ್ಟ ಅಂಗಡಿಯನ್ನು ಸಹ ನಡೆಸುತ್ತಿರುತ್ತಾಳೆ.
ಅಂಗಡಿಯಲ್ಲಿ ಜೆರಾಕ್ಸ್ ಮಿಷನ್ , ಹೊಲಿಗೆ ಯತ್ರ, ಲ್ಯಾಪ್ಟಾಪ್ ಸೇರಿದಂತೆ ಅಂಗಡಿಯಲ್ಲಿದ್ದ ವಸ್ತುಗಳು ಸಹ ಸಂಪೂರ್ಣ ನಾಶವಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಈ ಘಟನೆಯಿಂದಾಗಿ ಮಕ್ಕಳು ಸೇರಿದಂತೆ ವಯೋವೃದ್ಧರು ಬೀದಿಗೆ ಬಿದ್ದಿದ್ದಾರೆ.
ಮರ ತೆಗೆಸುವಂತೆ ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡಿದ್ದರೂ ಮರ ತೆಗೆಸದ ಅಧಿಕಾರಿಗಳ ಬೇಜವಾಬ್ದಾರಿಯಿಂದ ಈ ದುರ್ಘಟನೆ ನಡೆದಿದೆ.


ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಕುಟುಂಬಸ್ಥರು ಮಾತನಾಡಿ ಮರ ತೆಗೆಸುವಂತೆ ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಇಂದು ಮರ ನಮ್ಮ ಮನೆ ಮೇಲೆ ಬಿದ್ದು ಮನೆ ಹಾಗೂ ಅಂಗಡಿಯಲ್ಲಿದ್ದ ಎಲ್ಲಾ ವಸ್ತುಗಳು ಸಂಪೂರ್ಣ ನಾಶವಾಗಿದೆ. ಇದರಿಂದಾಗಿ ಈಗ ಬೀದಿಗೆ ಬಿದ್ದು ನಮಗೆ ದಿಕ್ಕು ತೋಚದಂತಾಗಿ ನಮಗೆ ಆತ್ಮಹತ್ಯೆ ಮಾಡಿಕೊಳ್ಳುವುದು ಒಂದೇ ದಾರಿ ಎಂದು ತಮ್ಮ ಅಳಲು ತೋಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು