9:26 AM Friday21 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ನಂಜನಗೂಡು: ಮೇವು ಕಟಾವು ಮಾಡಲು ತೆರಳಿದ್ದ ರೈತನ ಮೇಲೆ ಚಿರತೆ ದಾಳಿ: ಆಸ್ಪತ್ರೆಗೆ ದಾಖಲು

04/08/2024, 19:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಜಮೀನಿನಲ್ಲಿ ಮೇವು ಕಟಾವು ಮಾಡಲು ತೆರಳಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ನಡೆದಿದೆ.

ಬಸವಣ್ಣ ಎಂಬಾತ ಚಿರತೆ ದಾಳಿಗೆ ಸಿಲುಕಿ ಗಾಯಗೊಂಡ ರೈತ. ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಿಗ್ಗೆಯಿಂದ ಸರಿ ಸುಮಾರು ನಾಲ್ಕು ಗಂಟೆಯವರೆಗೂ ನಮ್ಮ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸಿ ಮನೆಗೆ ತೆರಳಲು ಮುಂದಾದಾಗ ಮೇವು ಕಟಾವು ಮಾಡಲು ಜಮೀನಿನ ಒಳಭಾಗಕ್ಕೆ ತೆರಳಿದಾಗ ಏಕಾಏಕಿ ಚಿರತೆ ನನ್ನ ಮೇಲೆ ಎಗರಿತು. ನಾನು ಗಾಬರಿಯಾಗಿ ಜೋರಾಗಿ ಕೂಗಿದ ಬಳಿಕ ನನ್ನನ್ನು ಬಿಟ್ಟಿತು ಎಂದು ಗಾಯಗೊಂಡು ಆಸ್ಪತ್ರೆ ಸೇರಿರುವ ರೈತ ಅಳಲು ತೋಡಿಕೊಂಡರು. ಸಿಂಧುವಳ್ಳಿ ಗ್ರಾಮದ ಸುತ್ತಮುತ್ತ ಚಿರತೆ ಮತ್ತು ಕಾಡುಪ್ರಾಣಿಗಳ ಕಾಟ ಹೆಚ್ಚಾಗಿದೆ.ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಮತ್ತು ಸಂಘಟಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು