1:40 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ನಂಜನಗೂಡು ನಗರಸಭೆ ಕಚೇರಿಯಲ್ಲಿ ಕಡತ ನಾಪತ್ತೆ ಪ್ರಕರಣ: ದ್ವಿತೀಯ ದರ್ಜೆ ಸಹಾಯಕರ ವಿರುದ್ದ ದೂರು ದಾಖಲಿಸಿದ ಕಂದಾಯ ಅಧಿಕಾರಿ

16/12/2023, 19:03

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಅಕ್ರಮವಾಗಿ ನಿವೇಶನಗಳಿಗೆ ಖಾತೆ ಮಾಡಿಕೊಟ್ಟ ಕಡತ ನಾಪತ್ತೆಯಾದ ಹಿನ್ನಲೆ ನಂಜನಗೂಡು ನಗರಸಭೆ ಕಂದಾಯ ಅಧಿಕಾರಿಯೊಬ್ಬರು ದ್ವಿತೀಯ ದರ್ಜೆ ಸಹಾಯಕರ ವಿರುದ್ದ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಡತದ ಸಂರಕ್ಷಣೆಯ ಜವಾಬ್ದಾರಿ ಹೊತ್ತಿರುವ ದ್ವಿತೀಯ ದರ್ಜೆ ಸಹಾಯಕ ಡಿ.ಎಂ.ನರಸಿಂಹಮೂರ್ತಿ ವಿರುದ್ದ ಕಂದಾಯ ಅಧಿಕಾರಿ ಎಸ್.ಡಿ.ವೆಂಕಟೇಶ್ ದೂರು ನೀಡಿದ್ದಾರೆ.
ನರಸಿಂಹ ಮೂರ್ತಿ ಅವರನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿ ಕಡತ ದೊರಕಿಸಿಕೊಡುವಂತೆ ದೂರಿನಲ್ಲಿ ತಿಳಿಸಿದ್ದಾರೆ.

ನಂಜನಗೂಡು ತಾಲೂಕು ದೇವೀರಮ್ಮನಹಳ್ಳಿ ಗ್ರಾಮದ ಸರ್ವೆ ನಂ.58,59 ರಲ್ಲಿ ಕೋಟ್ಯಂತರ ರೂಪಾಯಿ ಬೆಲೆಬಾಳುವ 3 ಎಕ್ರೆ 16 ಗುಂಟೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಬಡಾವಣೆಯ ಖಾತೆಯನ್ನ ಅಕ್ರಮವಾಗಿ KMF-24 ರ ವಹಿಯಲ್ಲಿ ನಮೂದಿಸಿದ್ದು, ಈ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿ ಹಾಗೂ ನೌಕರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದ್ದು, KMF-24 ಸಂಖ್ಯೆ 106 ರಲ್ಲಿ ನಮೂದಿಸಿರುವ ಅಸೆಸ್ ಮೆಂಟ್ 17115/406/1 ರಿಂದ 17115/406/48 ರವರೆಗೆ 48 ಖಾತೆಗಳನ್ನ ಅಕ್ರಮವಾಗಿ ದಾಖಲಿಸಿರುವ ಕಡತದ ನಿರ್ವಹಣೆ ಹಾಗೂ ಸಂರಕ್ಷಣೆ ಜವಾಬ್ದಾರಿ ಡಿ.ಎಂ.ನರಸಿಂಹಮೂರ್ತಿಯವರದ್ದಾಗಿದೆ. ಆದರೆ ಈ ಕಡತ ನಾಪತ್ತೆಯಾಗಿದ್ದು ಲಭ್ಯವಿಲ್ಲದ ಕಾರಣ ಡಿ.ಎಂ.ನರಸಿಂಹಮೂರ್ತಿಯವರನ್ನ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿ ಕಡತ ದೊರಕಿಸಿಕೊಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಗರಸಭೆ ಕಂದಾಯ ಇಲಾಖೆ ಅಧಿಕಾರಿ ವೆಂಕಟೇಶ್ ದೂರು ನೀಡಿ ಒಂದು ತಿಂಗಳು ಕಳೆದರೂ ನಂಜನಗೂಡು ಪಟ್ಟಣ ಪೊಲೀಸರು ಕೂಡ ತನಿಖೆ ಮಾಡಿ ಕ್ರಮ ಕೈಗೊಳ್ಳುವುದರ ಬದಲಾಗಿ ಮೌನಕ್ಕೆ ಶರಣಾಗಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವಕ್ಷೇತ್ರದ ಸರ್ಕಾರಿ ಕಚೇರಿಯಲ್ಲಿ ಕಡತ ನಾಪತ್ತೆಯಾಗಿರುವ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅಲ್ಲದೆ ಈಗ ನಗರಸಭೆಯಲ್ಲಿ ಅಧ್ಯಕ್ಷರು ಇಲ್ಲದ ಕಾರಣ ಜಿಲ್ಲಾಧಿಕಾರಿಯವರೇ ಆಡಳಿತಾ ಧಿಕಾರಿಯಾಗಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಾಗೂ ಜಿಲ್ಲಾಧಿಕಾರಿಯವರು ಇದರ ಬಗ್ಗೆ ಎಚ್ಚೆತ್ತು ಭೂಗಳ್ಳರ ಜೊತೆ ಶಾಮೀಲಾಗಿರುವ ಅಧಿಕಾರಿಗಳಿಗೆ ಸರ್ಜರಿ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗ ಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು