12:05 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ನಂಜನಗೂಡು ನಗರಸಭೆ ಕಚೇರಿಯಲ್ಲಿ ಕಡತ ನಾಪತ್ತೆ ಪ್ರಕರಣ: ದ್ವಿತೀಯ ದರ್ಜೆ ಸಹಾಯಕರ ವಿರುದ್ದ ದೂರು ದಾಖಲಿಸಿದ ಕಂದಾಯ ಅಧಿಕಾರಿ

16/12/2023, 19:03

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಅಕ್ರಮವಾಗಿ ನಿವೇಶನಗಳಿಗೆ ಖಾತೆ ಮಾಡಿಕೊಟ್ಟ ಕಡತ ನಾಪತ್ತೆಯಾದ ಹಿನ್ನಲೆ ನಂಜನಗೂಡು ನಗರಸಭೆ ಕಂದಾಯ ಅಧಿಕಾರಿಯೊಬ್ಬರು ದ್ವಿತೀಯ ದರ್ಜೆ ಸಹಾಯಕರ ವಿರುದ್ದ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಡತದ ಸಂರಕ್ಷಣೆಯ ಜವಾಬ್ದಾರಿ ಹೊತ್ತಿರುವ ದ್ವಿತೀಯ ದರ್ಜೆ ಸಹಾಯಕ ಡಿ.ಎಂ.ನರಸಿಂಹಮೂರ್ತಿ ವಿರುದ್ದ ಕಂದಾಯ ಅಧಿಕಾರಿ ಎಸ್.ಡಿ.ವೆಂಕಟೇಶ್ ದೂರು ನೀಡಿದ್ದಾರೆ.
ನರಸಿಂಹ ಮೂರ್ತಿ ಅವರನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿ ಕಡತ ದೊರಕಿಸಿಕೊಡುವಂತೆ ದೂರಿನಲ್ಲಿ ತಿಳಿಸಿದ್ದಾರೆ.

ನಂಜನಗೂಡು ತಾಲೂಕು ದೇವೀರಮ್ಮನಹಳ್ಳಿ ಗ್ರಾಮದ ಸರ್ವೆ ನಂ.58,59 ರಲ್ಲಿ ಕೋಟ್ಯಂತರ ರೂಪಾಯಿ ಬೆಲೆಬಾಳುವ 3 ಎಕ್ರೆ 16 ಗುಂಟೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಬಡಾವಣೆಯ ಖಾತೆಯನ್ನ ಅಕ್ರಮವಾಗಿ KMF-24 ರ ವಹಿಯಲ್ಲಿ ನಮೂದಿಸಿದ್ದು, ಈ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿ ಹಾಗೂ ನೌಕರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದ್ದು, KMF-24 ಸಂಖ್ಯೆ 106 ರಲ್ಲಿ ನಮೂದಿಸಿರುವ ಅಸೆಸ್ ಮೆಂಟ್ 17115/406/1 ರಿಂದ 17115/406/48 ರವರೆಗೆ 48 ಖಾತೆಗಳನ್ನ ಅಕ್ರಮವಾಗಿ ದಾಖಲಿಸಿರುವ ಕಡತದ ನಿರ್ವಹಣೆ ಹಾಗೂ ಸಂರಕ್ಷಣೆ ಜವಾಬ್ದಾರಿ ಡಿ.ಎಂ.ನರಸಿಂಹಮೂರ್ತಿಯವರದ್ದಾಗಿದೆ. ಆದರೆ ಈ ಕಡತ ನಾಪತ್ತೆಯಾಗಿದ್ದು ಲಭ್ಯವಿಲ್ಲದ ಕಾರಣ ಡಿ.ಎಂ.ನರಸಿಂಹಮೂರ್ತಿಯವರನ್ನ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿ ಕಡತ ದೊರಕಿಸಿಕೊಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಗರಸಭೆ ಕಂದಾಯ ಇಲಾಖೆ ಅಧಿಕಾರಿ ವೆಂಕಟೇಶ್ ದೂರು ನೀಡಿ ಒಂದು ತಿಂಗಳು ಕಳೆದರೂ ನಂಜನಗೂಡು ಪಟ್ಟಣ ಪೊಲೀಸರು ಕೂಡ ತನಿಖೆ ಮಾಡಿ ಕ್ರಮ ಕೈಗೊಳ್ಳುವುದರ ಬದಲಾಗಿ ಮೌನಕ್ಕೆ ಶರಣಾಗಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವಕ್ಷೇತ್ರದ ಸರ್ಕಾರಿ ಕಚೇರಿಯಲ್ಲಿ ಕಡತ ನಾಪತ್ತೆಯಾಗಿರುವ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅಲ್ಲದೆ ಈಗ ನಗರಸಭೆಯಲ್ಲಿ ಅಧ್ಯಕ್ಷರು ಇಲ್ಲದ ಕಾರಣ ಜಿಲ್ಲಾಧಿಕಾರಿಯವರೇ ಆಡಳಿತಾ ಧಿಕಾರಿಯಾಗಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಾಗೂ ಜಿಲ್ಲಾಧಿಕಾರಿಯವರು ಇದರ ಬಗ್ಗೆ ಎಚ್ಚೆತ್ತು ಭೂಗಳ್ಳರ ಜೊತೆ ಶಾಮೀಲಾಗಿರುವ ಅಧಿಕಾರಿಗಳಿಗೆ ಸರ್ಜರಿ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗ ಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು