10:13 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ…

ಇತ್ತೀಚಿನ ಸುದ್ದಿ

ನಂಜನಗೂಡು: ನಾಳೆ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಹುಲ್ಲಹಳ್ಳಿಯಲ್ಲಿ ಹಜ್ರತ್ ಸೈದಾನಿ ಬೀ ಮಾ ದರ್ಗಾ ಉರೂಸ್

09/02/2024, 19:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಬೆಳಲೆ ಗೇಟ್ ಬಳಿ ಇರುವ ಹಿಂದೂ ಮತ್ತು ಮುಸ್ಲಿಂ ಸಾಮರಸ್ಯ ಹಾಗೂ ಭಾವೈಕ್ಯತೆಯನ್ನು ಸಾರುವ ಹಜ್ರತ್ ಸೈದಾನಿ ಬೀ ಮಾ ದರ್ಗಾ ಶರೀಫ್ ಊರೂಸ್ ಹಾಗೂ ಗಂಧದ ಮಹೋತ್ಸವವನ್ನು ಫೆಬ್ರವರಿ 10ರಂದು ಸಂಜೆ ಸಡಗರ ಮತ್ತು ಸಂಭ್ರಮದಿಂದ ಸಾವಿರಾರು ಭಕ್ತರ ಸಮೂಹದಲ್ಲಿ ನಡೆಯಲಿದೆ ಎಂದು ದರ್ಗದ ಗುರುಗಳಾದ ಶಮ್ಸುದ್ದೀನ್ ಜೂರಿ ಖಾಜೂರು ತಿಳಿಸಿದ್ದಾರೆ.


ಮಾಧ್ಯಮದೊಂದಿಗೆ ಮಾತನಾಡಿದ ಅವರು ಫೆಬ್ರವರಿ 10 ಶನಿವಾರ ಸಂಜೆ 6 ಗಂಟೆಗೆ ಹುಲ್ಲಹಳ್ಳಿ ಜಾಮಿಯ ಮಸೀದಿ ಯಿಂದ ಹೂಗಳಿಂದ ಅಲಂಕರಿಸಲಾದ ಪಲ್ಲಕ್ಕಿ ವಾಹನದಲ್ಲಿ ಸಂದಲ್ ಮೆರವಣಿಗೆಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ಬಂದ ಗಂಧವನ್ನು ಮದ್ದೂರು ತಾಲೂಕಿನ ವಿಠಲಪುರದ ಹಜರತ್ ಶಾ ಮಹಮ್ಮದ್ ಉಸ್ಮಾನ್ ಖಾದ್ರಿ ತಂಡ ದ ವತಿಯಿಂದ ಗಂಧವನ್ನು ದರ್ಗಾ ಕೆ ಸಮರ್ಪಿಸಲಾಗುತ್ತದೆ ಎಂದು ತಿಳಿಸಿದರು
ಇದೇ ಸಂದರ್ಭ ದರ್ಗಾದಲ್ಲಿ ವಿವಿಧ ಧರ್ಮ ಗುರುಗಳ ಧಾರ್ಮಿಕ ಸಭೆ, ಸೇರಿದಂತೆ ಗುಂಡ್ಲುಪೇಟೆ ವಿದ್ಯಾರ್ಥಿಗಳಿಂದ ಧಫ್, ಕೇರಳ ತಂಡದವರಿಂದ ಸುಪ್ರಸಿದ್ಧ ಬುರ್ದಾ ಮಜ್ಲಿಸ್ ಹಾಗೂ ಪ್ರಸಿದ್ಧ ಕವ್ವಾಲಿ ತಂಡದವರಿಂದ ಬೆಳಗಿನ ಜಾವದವರಿಗೂ ಕವಾಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಇದಕ್ಕಾಗಿ ಹುಲ್ಲಹಳ್ಳಿ ಪೊಲೀಸರು ಹಾಗೂ ಧರ್ಮ ಗುರುಗಳು ಸೇರಿದಂತೆ ಗ್ರಾಮದ ಮುಖಂಡರು ದರ್ಗಾದ ಬಳಿ ತೆರಳಿ ಉರುಸ್ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ನಾಳೆ ನಡೆಯುವ ಉರುಸ್ ಕಾರ್ಯಕ್ರಮಕ್ಕೆ ಸರ್ವಧರ್ಮೀಯರು ಭಾಗವಹಿಸಿ ಸಹಕರಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು