9:51 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ನಂಜನಗೂಡು: ನಾಳೆ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಹುಲ್ಲಹಳ್ಳಿಯಲ್ಲಿ ಹಜ್ರತ್ ಸೈದಾನಿ ಬೀ ಮಾ ದರ್ಗಾ ಉರೂಸ್

09/02/2024, 19:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಬೆಳಲೆ ಗೇಟ್ ಬಳಿ ಇರುವ ಹಿಂದೂ ಮತ್ತು ಮುಸ್ಲಿಂ ಸಾಮರಸ್ಯ ಹಾಗೂ ಭಾವೈಕ್ಯತೆಯನ್ನು ಸಾರುವ ಹಜ್ರತ್ ಸೈದಾನಿ ಬೀ ಮಾ ದರ್ಗಾ ಶರೀಫ್ ಊರೂಸ್ ಹಾಗೂ ಗಂಧದ ಮಹೋತ್ಸವವನ್ನು ಫೆಬ್ರವರಿ 10ರಂದು ಸಂಜೆ ಸಡಗರ ಮತ್ತು ಸಂಭ್ರಮದಿಂದ ಸಾವಿರಾರು ಭಕ್ತರ ಸಮೂಹದಲ್ಲಿ ನಡೆಯಲಿದೆ ಎಂದು ದರ್ಗದ ಗುರುಗಳಾದ ಶಮ್ಸುದ್ದೀನ್ ಜೂರಿ ಖಾಜೂರು ತಿಳಿಸಿದ್ದಾರೆ.


ಮಾಧ್ಯಮದೊಂದಿಗೆ ಮಾತನಾಡಿದ ಅವರು ಫೆಬ್ರವರಿ 10 ಶನಿವಾರ ಸಂಜೆ 6 ಗಂಟೆಗೆ ಹುಲ್ಲಹಳ್ಳಿ ಜಾಮಿಯ ಮಸೀದಿ ಯಿಂದ ಹೂಗಳಿಂದ ಅಲಂಕರಿಸಲಾದ ಪಲ್ಲಕ್ಕಿ ವಾಹನದಲ್ಲಿ ಸಂದಲ್ ಮೆರವಣಿಗೆಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ಬಂದ ಗಂಧವನ್ನು ಮದ್ದೂರು ತಾಲೂಕಿನ ವಿಠಲಪುರದ ಹಜರತ್ ಶಾ ಮಹಮ್ಮದ್ ಉಸ್ಮಾನ್ ಖಾದ್ರಿ ತಂಡ ದ ವತಿಯಿಂದ ಗಂಧವನ್ನು ದರ್ಗಾ ಕೆ ಸಮರ್ಪಿಸಲಾಗುತ್ತದೆ ಎಂದು ತಿಳಿಸಿದರು
ಇದೇ ಸಂದರ್ಭ ದರ್ಗಾದಲ್ಲಿ ವಿವಿಧ ಧರ್ಮ ಗುರುಗಳ ಧಾರ್ಮಿಕ ಸಭೆ, ಸೇರಿದಂತೆ ಗುಂಡ್ಲುಪೇಟೆ ವಿದ್ಯಾರ್ಥಿಗಳಿಂದ ಧಫ್, ಕೇರಳ ತಂಡದವರಿಂದ ಸುಪ್ರಸಿದ್ಧ ಬುರ್ದಾ ಮಜ್ಲಿಸ್ ಹಾಗೂ ಪ್ರಸಿದ್ಧ ಕವ್ವಾಲಿ ತಂಡದವರಿಂದ ಬೆಳಗಿನ ಜಾವದವರಿಗೂ ಕವಾಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಇದಕ್ಕಾಗಿ ಹುಲ್ಲಹಳ್ಳಿ ಪೊಲೀಸರು ಹಾಗೂ ಧರ್ಮ ಗುರುಗಳು ಸೇರಿದಂತೆ ಗ್ರಾಮದ ಮುಖಂಡರು ದರ್ಗಾದ ಬಳಿ ತೆರಳಿ ಉರುಸ್ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ನಾಳೆ ನಡೆಯುವ ಉರುಸ್ ಕಾರ್ಯಕ್ರಮಕ್ಕೆ ಸರ್ವಧರ್ಮೀಯರು ಭಾಗವಹಿಸಿ ಸಹಕರಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು