7:01 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ನಂಜನಗೂಡು: ನಾಳೆ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಹುಲ್ಲಹಳ್ಳಿಯಲ್ಲಿ ಹಜ್ರತ್ ಸೈದಾನಿ ಬೀ ಮಾ ದರ್ಗಾ ಉರೂಸ್

09/02/2024, 19:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಬೆಳಲೆ ಗೇಟ್ ಬಳಿ ಇರುವ ಹಿಂದೂ ಮತ್ತು ಮುಸ್ಲಿಂ ಸಾಮರಸ್ಯ ಹಾಗೂ ಭಾವೈಕ್ಯತೆಯನ್ನು ಸಾರುವ ಹಜ್ರತ್ ಸೈದಾನಿ ಬೀ ಮಾ ದರ್ಗಾ ಶರೀಫ್ ಊರೂಸ್ ಹಾಗೂ ಗಂಧದ ಮಹೋತ್ಸವವನ್ನು ಫೆಬ್ರವರಿ 10ರಂದು ಸಂಜೆ ಸಡಗರ ಮತ್ತು ಸಂಭ್ರಮದಿಂದ ಸಾವಿರಾರು ಭಕ್ತರ ಸಮೂಹದಲ್ಲಿ ನಡೆಯಲಿದೆ ಎಂದು ದರ್ಗದ ಗುರುಗಳಾದ ಶಮ್ಸುದ್ದೀನ್ ಜೂರಿ ಖಾಜೂರು ತಿಳಿಸಿದ್ದಾರೆ.


ಮಾಧ್ಯಮದೊಂದಿಗೆ ಮಾತನಾಡಿದ ಅವರು ಫೆಬ್ರವರಿ 10 ಶನಿವಾರ ಸಂಜೆ 6 ಗಂಟೆಗೆ ಹುಲ್ಲಹಳ್ಳಿ ಜಾಮಿಯ ಮಸೀದಿ ಯಿಂದ ಹೂಗಳಿಂದ ಅಲಂಕರಿಸಲಾದ ಪಲ್ಲಕ್ಕಿ ವಾಹನದಲ್ಲಿ ಸಂದಲ್ ಮೆರವಣಿಗೆಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ಬಂದ ಗಂಧವನ್ನು ಮದ್ದೂರು ತಾಲೂಕಿನ ವಿಠಲಪುರದ ಹಜರತ್ ಶಾ ಮಹಮ್ಮದ್ ಉಸ್ಮಾನ್ ಖಾದ್ರಿ ತಂಡ ದ ವತಿಯಿಂದ ಗಂಧವನ್ನು ದರ್ಗಾ ಕೆ ಸಮರ್ಪಿಸಲಾಗುತ್ತದೆ ಎಂದು ತಿಳಿಸಿದರು
ಇದೇ ಸಂದರ್ಭ ದರ್ಗಾದಲ್ಲಿ ವಿವಿಧ ಧರ್ಮ ಗುರುಗಳ ಧಾರ್ಮಿಕ ಸಭೆ, ಸೇರಿದಂತೆ ಗುಂಡ್ಲುಪೇಟೆ ವಿದ್ಯಾರ್ಥಿಗಳಿಂದ ಧಫ್, ಕೇರಳ ತಂಡದವರಿಂದ ಸುಪ್ರಸಿದ್ಧ ಬುರ್ದಾ ಮಜ್ಲಿಸ್ ಹಾಗೂ ಪ್ರಸಿದ್ಧ ಕವ್ವಾಲಿ ತಂಡದವರಿಂದ ಬೆಳಗಿನ ಜಾವದವರಿಗೂ ಕವಾಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಇದಕ್ಕಾಗಿ ಹುಲ್ಲಹಳ್ಳಿ ಪೊಲೀಸರು ಹಾಗೂ ಧರ್ಮ ಗುರುಗಳು ಸೇರಿದಂತೆ ಗ್ರಾಮದ ಮುಖಂಡರು ದರ್ಗಾದ ಬಳಿ ತೆರಳಿ ಉರುಸ್ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ನಾಳೆ ನಡೆಯುವ ಉರುಸ್ ಕಾರ್ಯಕ್ರಮಕ್ಕೆ ಸರ್ವಧರ್ಮೀಯರು ಭಾಗವಹಿಸಿ ಸಹಕರಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು