2:27 AM Saturday15 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ನಂಜನಗೂಡು: ನರಹಂತಕ ವ್ಯಾಘ್ರನ ಸೆರೆ ಕುರಿತು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದು ಏನು?; ಇನ್ನೆರಡು ದಿನಗಳೊಳಗೆ ಹುಲಿ ಬಲೆಗೆ ಬೀಳುತ್ತಾ?

27/11/2023, 20:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹೆಡಿಯಾಲ ಮತ್ತು ಬಳ್ಳೂರು ಹುಂಡಿ ಗ್ರಾಮಗಳ ಜನರನ್ನು ಬೆಚ್ಚಿ ಬೆಳಿಸಿರುವ ನರಭಕ್ಷಕ ಹುಲಿಯ ಸೆರೆಗೆ ಕೌಂಟ್ ಡೌನ್ ಶುರುವಾಗಿದೆ ಎಂದು ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದಾರೆ.
ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ನರಹಂತಕ ಹುಲಿಯನ್ನು ಇಂದು ಸಂಜೆ ಅಥವಾ ನಾಳೆ ಒಳಗಾಗಿ ಸೆರೆ ಹಿಡಿಯುತ್ತಾರೆ. ಈಗಾಗಲೇ ನೂರು ಜನ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 50ಕ್ಕೂ ಹೆಚ್ಚು ಕ್ಯಾಮರಗಳನ್ನು ಅಳವಡಿಸಲಾಗಿದೆ. ಡ್ರೋನ್ ಕ್ಯಾಮೆರಾದ ಮೂಲಕ ಹುಲಿಯ ಚಲನ ವಲನಗಳನ್ನು ಸೆರೆ ಹಿಡಿದು ಪತ್ತೆ ಹಚ್ಚಲಾಗಿದೆ.
ಹುಲಿ ಸಂರಕ್ಷಣಾ ಪ್ರಾಧಿಕಾರ ದೆಹಲಿಯಿಂದ ಈಗಾಗಲೇ ಹುಲಿ ಸೆರೆಗೆ ಪತ್ರ ರವಾನೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ವಹಿಸಿ ನರಭಕ್ಷಕ ಹುಲಿ ಸರೆಗೆ ಮುಂದಾಗಿದ್ದಾರೆ ಎಂದರು.
ಹೆಡಿಯಾಲ ಮತ್ತು ಬಳ್ಳೂರು ಹುಂಡಿ ಗ್ರಾಮದ ಸುತ್ತಮುತ್ತಲ ಸಾರ್ವಜನಿಕರು ರೈತರು ಮಹಿಳೆಯರು ಆತಂಕ ಪಡುವುದು ಬೇಡ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಯಾರು ಭಯಪಡುವುದು ಬೇಡ. ಹೆಡಿಯಾಲ ಮತ್ತು ಓಂಕಾರ ಅರಣ್ಯ ವಲಯದಲ್ಲಿ ಅಧಿಕಾರಿಗಳು ಒಮ್ಮತದಿಂದ ಕಾರ್ಯನಿರ್ವಹಿಸುತ್ತಿಲ್ಲ.
ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷತನ ಎದ್ದು ಕಾಣುತ್ತಿದೆ.
ವಿಧಾನಸೌಧದ ಅಧಿವೇಶನದ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ ಮತ್ತು ಲೋಪದ ಬಗ್ಗೆ ಚರ್ಚಿಸಿ
ನಿರ್ಲಕ್ಷ್ಯತನದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗುತ್ತೇವೆ. ಈಗಾಗಲೇ ಹೆಡಿಯಾಲ ಮತ್ತು ಓಂಕಾರ ಅರಣ್ಯ ಪ್ರದೇಶದ ಅಭಿವೃದ್ಧಿಯ ಹೆಸರಿನಲ್ಲಿ ಲೋಪ ದೋಷಗಳು ನಡೆದಿದ್ದು ಅದರ ತನಿಖೆಗೂ ಮುಂದಾಗುತ್ತೇವೆ
ಎಂದು ಮಾಧ್ಯಮದವರಿಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು