1:51 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ನಂಜನಗೂಡು: ನರಹಂತಕ ವ್ಯಾಘ್ರನ ಸೆರೆ ಕುರಿತು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದು ಏನು?; ಇನ್ನೆರಡು ದಿನಗಳೊಳಗೆ ಹುಲಿ ಬಲೆಗೆ ಬೀಳುತ್ತಾ?

27/11/2023, 20:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹೆಡಿಯಾಲ ಮತ್ತು ಬಳ್ಳೂರು ಹುಂಡಿ ಗ್ರಾಮಗಳ ಜನರನ್ನು ಬೆಚ್ಚಿ ಬೆಳಿಸಿರುವ ನರಭಕ್ಷಕ ಹುಲಿಯ ಸೆರೆಗೆ ಕೌಂಟ್ ಡೌನ್ ಶುರುವಾಗಿದೆ ಎಂದು ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದಾರೆ.
ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ನರಹಂತಕ ಹುಲಿಯನ್ನು ಇಂದು ಸಂಜೆ ಅಥವಾ ನಾಳೆ ಒಳಗಾಗಿ ಸೆರೆ ಹಿಡಿಯುತ್ತಾರೆ. ಈಗಾಗಲೇ ನೂರು ಜನ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 50ಕ್ಕೂ ಹೆಚ್ಚು ಕ್ಯಾಮರಗಳನ್ನು ಅಳವಡಿಸಲಾಗಿದೆ. ಡ್ರೋನ್ ಕ್ಯಾಮೆರಾದ ಮೂಲಕ ಹುಲಿಯ ಚಲನ ವಲನಗಳನ್ನು ಸೆರೆ ಹಿಡಿದು ಪತ್ತೆ ಹಚ್ಚಲಾಗಿದೆ.
ಹುಲಿ ಸಂರಕ್ಷಣಾ ಪ್ರಾಧಿಕಾರ ದೆಹಲಿಯಿಂದ ಈಗಾಗಲೇ ಹುಲಿ ಸೆರೆಗೆ ಪತ್ರ ರವಾನೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ವಹಿಸಿ ನರಭಕ್ಷಕ ಹುಲಿ ಸರೆಗೆ ಮುಂದಾಗಿದ್ದಾರೆ ಎಂದರು.
ಹೆಡಿಯಾಲ ಮತ್ತು ಬಳ್ಳೂರು ಹುಂಡಿ ಗ್ರಾಮದ ಸುತ್ತಮುತ್ತಲ ಸಾರ್ವಜನಿಕರು ರೈತರು ಮಹಿಳೆಯರು ಆತಂಕ ಪಡುವುದು ಬೇಡ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಯಾರು ಭಯಪಡುವುದು ಬೇಡ. ಹೆಡಿಯಾಲ ಮತ್ತು ಓಂಕಾರ ಅರಣ್ಯ ವಲಯದಲ್ಲಿ ಅಧಿಕಾರಿಗಳು ಒಮ್ಮತದಿಂದ ಕಾರ್ಯನಿರ್ವಹಿಸುತ್ತಿಲ್ಲ.
ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷತನ ಎದ್ದು ಕಾಣುತ್ತಿದೆ.
ವಿಧಾನಸೌಧದ ಅಧಿವೇಶನದ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ ಮತ್ತು ಲೋಪದ ಬಗ್ಗೆ ಚರ್ಚಿಸಿ
ನಿರ್ಲಕ್ಷ್ಯತನದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗುತ್ತೇವೆ. ಈಗಾಗಲೇ ಹೆಡಿಯಾಲ ಮತ್ತು ಓಂಕಾರ ಅರಣ್ಯ ಪ್ರದೇಶದ ಅಭಿವೃದ್ಧಿಯ ಹೆಸರಿನಲ್ಲಿ ಲೋಪ ದೋಷಗಳು ನಡೆದಿದ್ದು ಅದರ ತನಿಖೆಗೂ ಮುಂದಾಗುತ್ತೇವೆ
ಎಂದು ಮಾಧ್ಯಮದವರಿಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು