11:41 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ನಂಜನಗೂಡು: ನರಹಂತಕ ವ್ಯಾಘ್ರನ ಸೆರೆ ಕುರಿತು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದು ಏನು?; ಇನ್ನೆರಡು ದಿನಗಳೊಳಗೆ ಹುಲಿ ಬಲೆಗೆ ಬೀಳುತ್ತಾ?

27/11/2023, 20:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹೆಡಿಯಾಲ ಮತ್ತು ಬಳ್ಳೂರು ಹುಂಡಿ ಗ್ರಾಮಗಳ ಜನರನ್ನು ಬೆಚ್ಚಿ ಬೆಳಿಸಿರುವ ನರಭಕ್ಷಕ ಹುಲಿಯ ಸೆರೆಗೆ ಕೌಂಟ್ ಡೌನ್ ಶುರುವಾಗಿದೆ ಎಂದು ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದಾರೆ.
ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ನರಹಂತಕ ಹುಲಿಯನ್ನು ಇಂದು ಸಂಜೆ ಅಥವಾ ನಾಳೆ ಒಳಗಾಗಿ ಸೆರೆ ಹಿಡಿಯುತ್ತಾರೆ. ಈಗಾಗಲೇ ನೂರು ಜನ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 50ಕ್ಕೂ ಹೆಚ್ಚು ಕ್ಯಾಮರಗಳನ್ನು ಅಳವಡಿಸಲಾಗಿದೆ. ಡ್ರೋನ್ ಕ್ಯಾಮೆರಾದ ಮೂಲಕ ಹುಲಿಯ ಚಲನ ವಲನಗಳನ್ನು ಸೆರೆ ಹಿಡಿದು ಪತ್ತೆ ಹಚ್ಚಲಾಗಿದೆ.
ಹುಲಿ ಸಂರಕ್ಷಣಾ ಪ್ರಾಧಿಕಾರ ದೆಹಲಿಯಿಂದ ಈಗಾಗಲೇ ಹುಲಿ ಸೆರೆಗೆ ಪತ್ರ ರವಾನೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ವಹಿಸಿ ನರಭಕ್ಷಕ ಹುಲಿ ಸರೆಗೆ ಮುಂದಾಗಿದ್ದಾರೆ ಎಂದರು.
ಹೆಡಿಯಾಲ ಮತ್ತು ಬಳ್ಳೂರು ಹುಂಡಿ ಗ್ರಾಮದ ಸುತ್ತಮುತ್ತಲ ಸಾರ್ವಜನಿಕರು ರೈತರು ಮಹಿಳೆಯರು ಆತಂಕ ಪಡುವುದು ಬೇಡ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಯಾರು ಭಯಪಡುವುದು ಬೇಡ. ಹೆಡಿಯಾಲ ಮತ್ತು ಓಂಕಾರ ಅರಣ್ಯ ವಲಯದಲ್ಲಿ ಅಧಿಕಾರಿಗಳು ಒಮ್ಮತದಿಂದ ಕಾರ್ಯನಿರ್ವಹಿಸುತ್ತಿಲ್ಲ.
ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷತನ ಎದ್ದು ಕಾಣುತ್ತಿದೆ.
ವಿಧಾನಸೌಧದ ಅಧಿವೇಶನದ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ ಮತ್ತು ಲೋಪದ ಬಗ್ಗೆ ಚರ್ಚಿಸಿ
ನಿರ್ಲಕ್ಷ್ಯತನದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗುತ್ತೇವೆ. ಈಗಾಗಲೇ ಹೆಡಿಯಾಲ ಮತ್ತು ಓಂಕಾರ ಅರಣ್ಯ ಪ್ರದೇಶದ ಅಭಿವೃದ್ಧಿಯ ಹೆಸರಿನಲ್ಲಿ ಲೋಪ ದೋಷಗಳು ನಡೆದಿದ್ದು ಅದರ ತನಿಖೆಗೂ ಮುಂದಾಗುತ್ತೇವೆ
ಎಂದು ಮಾಧ್ಯಮದವರಿಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು