6:59 PM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ…

ಇತ್ತೀಚಿನ ಸುದ್ದಿ

ನಂಜನಗೂಡು: ನರಹಂತಕ ವ್ಯಾಘ್ರನ ಸೆರೆ ಕುರಿತು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದು ಏನು?; ಇನ್ನೆರಡು ದಿನಗಳೊಳಗೆ ಹುಲಿ ಬಲೆಗೆ ಬೀಳುತ್ತಾ?

27/11/2023, 20:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹೆಡಿಯಾಲ ಮತ್ತು ಬಳ್ಳೂರು ಹುಂಡಿ ಗ್ರಾಮಗಳ ಜನರನ್ನು ಬೆಚ್ಚಿ ಬೆಳಿಸಿರುವ ನರಭಕ್ಷಕ ಹುಲಿಯ ಸೆರೆಗೆ ಕೌಂಟ್ ಡೌನ್ ಶುರುವಾಗಿದೆ ಎಂದು ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದಾರೆ.
ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ನರಹಂತಕ ಹುಲಿಯನ್ನು ಇಂದು ಸಂಜೆ ಅಥವಾ ನಾಳೆ ಒಳಗಾಗಿ ಸೆರೆ ಹಿಡಿಯುತ್ತಾರೆ. ಈಗಾಗಲೇ ನೂರು ಜನ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 50ಕ್ಕೂ ಹೆಚ್ಚು ಕ್ಯಾಮರಗಳನ್ನು ಅಳವಡಿಸಲಾಗಿದೆ. ಡ್ರೋನ್ ಕ್ಯಾಮೆರಾದ ಮೂಲಕ ಹುಲಿಯ ಚಲನ ವಲನಗಳನ್ನು ಸೆರೆ ಹಿಡಿದು ಪತ್ತೆ ಹಚ್ಚಲಾಗಿದೆ.
ಹುಲಿ ಸಂರಕ್ಷಣಾ ಪ್ರಾಧಿಕಾರ ದೆಹಲಿಯಿಂದ ಈಗಾಗಲೇ ಹುಲಿ ಸೆರೆಗೆ ಪತ್ರ ರವಾನೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ವಹಿಸಿ ನರಭಕ್ಷಕ ಹುಲಿ ಸರೆಗೆ ಮುಂದಾಗಿದ್ದಾರೆ ಎಂದರು.
ಹೆಡಿಯಾಲ ಮತ್ತು ಬಳ್ಳೂರು ಹುಂಡಿ ಗ್ರಾಮದ ಸುತ್ತಮುತ್ತಲ ಸಾರ್ವಜನಿಕರು ರೈತರು ಮಹಿಳೆಯರು ಆತಂಕ ಪಡುವುದು ಬೇಡ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಯಾರು ಭಯಪಡುವುದು ಬೇಡ. ಹೆಡಿಯಾಲ ಮತ್ತು ಓಂಕಾರ ಅರಣ್ಯ ವಲಯದಲ್ಲಿ ಅಧಿಕಾರಿಗಳು ಒಮ್ಮತದಿಂದ ಕಾರ್ಯನಿರ್ವಹಿಸುತ್ತಿಲ್ಲ.
ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷತನ ಎದ್ದು ಕಾಣುತ್ತಿದೆ.
ವಿಧಾನಸೌಧದ ಅಧಿವೇಶನದ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ ಮತ್ತು ಲೋಪದ ಬಗ್ಗೆ ಚರ್ಚಿಸಿ
ನಿರ್ಲಕ್ಷ್ಯತನದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗುತ್ತೇವೆ. ಈಗಾಗಲೇ ಹೆಡಿಯಾಲ ಮತ್ತು ಓಂಕಾರ ಅರಣ್ಯ ಪ್ರದೇಶದ ಅಭಿವೃದ್ಧಿಯ ಹೆಸರಿನಲ್ಲಿ ಲೋಪ ದೋಷಗಳು ನಡೆದಿದ್ದು ಅದರ ತನಿಖೆಗೂ ಮುಂದಾಗುತ್ತೇವೆ
ಎಂದು ಮಾಧ್ಯಮದವರಿಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು