5:48 AM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ನಂಜನಗೂಡು: ನರಹಂತಕ ವ್ಯಾಘ್ರನ ಸೆರೆ ಕುರಿತು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದು ಏನು?; ಇನ್ನೆರಡು ದಿನಗಳೊಳಗೆ ಹುಲಿ ಬಲೆಗೆ ಬೀಳುತ್ತಾ?

27/11/2023, 20:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹೆಡಿಯಾಲ ಮತ್ತು ಬಳ್ಳೂರು ಹುಂಡಿ ಗ್ರಾಮಗಳ ಜನರನ್ನು ಬೆಚ್ಚಿ ಬೆಳಿಸಿರುವ ನರಭಕ್ಷಕ ಹುಲಿಯ ಸೆರೆಗೆ ಕೌಂಟ್ ಡೌನ್ ಶುರುವಾಗಿದೆ ಎಂದು ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದಾರೆ.
ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ನರಹಂತಕ ಹುಲಿಯನ್ನು ಇಂದು ಸಂಜೆ ಅಥವಾ ನಾಳೆ ಒಳಗಾಗಿ ಸೆರೆ ಹಿಡಿಯುತ್ತಾರೆ. ಈಗಾಗಲೇ ನೂರು ಜನ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 50ಕ್ಕೂ ಹೆಚ್ಚು ಕ್ಯಾಮರಗಳನ್ನು ಅಳವಡಿಸಲಾಗಿದೆ. ಡ್ರೋನ್ ಕ್ಯಾಮೆರಾದ ಮೂಲಕ ಹುಲಿಯ ಚಲನ ವಲನಗಳನ್ನು ಸೆರೆ ಹಿಡಿದು ಪತ್ತೆ ಹಚ್ಚಲಾಗಿದೆ.
ಹುಲಿ ಸಂರಕ್ಷಣಾ ಪ್ರಾಧಿಕಾರ ದೆಹಲಿಯಿಂದ ಈಗಾಗಲೇ ಹುಲಿ ಸೆರೆಗೆ ಪತ್ರ ರವಾನೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ವಹಿಸಿ ನರಭಕ್ಷಕ ಹುಲಿ ಸರೆಗೆ ಮುಂದಾಗಿದ್ದಾರೆ ಎಂದರು.
ಹೆಡಿಯಾಲ ಮತ್ತು ಬಳ್ಳೂರು ಹುಂಡಿ ಗ್ರಾಮದ ಸುತ್ತಮುತ್ತಲ ಸಾರ್ವಜನಿಕರು ರೈತರು ಮಹಿಳೆಯರು ಆತಂಕ ಪಡುವುದು ಬೇಡ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಯಾರು ಭಯಪಡುವುದು ಬೇಡ. ಹೆಡಿಯಾಲ ಮತ್ತು ಓಂಕಾರ ಅರಣ್ಯ ವಲಯದಲ್ಲಿ ಅಧಿಕಾರಿಗಳು ಒಮ್ಮತದಿಂದ ಕಾರ್ಯನಿರ್ವಹಿಸುತ್ತಿಲ್ಲ.
ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷತನ ಎದ್ದು ಕಾಣುತ್ತಿದೆ.
ವಿಧಾನಸೌಧದ ಅಧಿವೇಶನದ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ ಮತ್ತು ಲೋಪದ ಬಗ್ಗೆ ಚರ್ಚಿಸಿ
ನಿರ್ಲಕ್ಷ್ಯತನದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗುತ್ತೇವೆ. ಈಗಾಗಲೇ ಹೆಡಿಯಾಲ ಮತ್ತು ಓಂಕಾರ ಅರಣ್ಯ ಪ್ರದೇಶದ ಅಭಿವೃದ್ಧಿಯ ಹೆಸರಿನಲ್ಲಿ ಲೋಪ ದೋಷಗಳು ನಡೆದಿದ್ದು ಅದರ ತನಿಖೆಗೂ ಮುಂದಾಗುತ್ತೇವೆ
ಎಂದು ಮಾಧ್ಯಮದವರಿಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು