5:31 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ನಂಜನಗೂಡು ನಗರಸಭೆ: ನೂತನ ಪೌರಾಯುಕ್ತರಾಗಿ ವಿಜಯ್ ಅಧಿಕಾರ ಸ್ವೀಕಾರ

10/12/2024, 18:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ನಗರ ಸಭೆಯ ನೂತನ ಪೌರಾಯುಕ್ತರಾಗಿ ವಿಜಯ್ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಹಿಂದಿನ ಪೌರಾಯುಕ್ತ ನಂಜುಂಡಸ್ವಾಮಿ ಅವರು ವರ್ಗಾವಣೆಗೊಂಡ ಹಿನ್ನೆಲೆ ತೆರವಾಗಿದ್ದ ಸ್ಥಾನಕ್ಕೆ ಮಡಿಕೇರಿಯಲ್ಲಿ ಪೌರಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್ ಅವರು ನಂಜನಗೂಡಿಗೆ ವರ್ಗಾವಣೆಗೊಂಡು ಅಧಿಕಾರ ಸ್ವೀಕರಿಸಿದ್ದಾರೆ.
2019ರಲ್ಲಿ ಪುರಸಭೆಯಿಂದ ನಗರಸಭೆಗೆ ಬಡ್ತಿ ಪಡೆದ ಸಂದರ್ಭ ಮೊದಲ ಪೌರಾಯುಕ್ತರಾಗಿ ಈ ಹಿಂದೆ ನಂಜನಗೂಡು ನಗರ ಸಭೆಯಲ್ಲಿ ಅವರು ಕಾರ್ಯನಿರ್ವಹಿಸಿದ್ದು,
ಈಗ ಎರಡನೇ ಬಾರಿಗೆ ಬಂದು ಕಾರ್ಯ ನಿರ್ವಹಿಸುತ್ತಿದ್ದಾರೆ.
ಈ ಹಿಂದೆ ನಗರಸಭೆಯಲ್ಲಿ ಕಾರ್ಯನಿರ್ವಹಿಸಿ ಅನುಭವ ಹೊಂದಿರುವ ಅವರು ನಂಜನಗೂಡಿನ ಕೆಲವು ಸವಾಲು ಹಾಗೂ ಸಮಸ್ಯೆಗಳನ್ನು ಎದುರಿಸಿ ನಗರಸಭೆಯ ಅಭಿವೃದ್ಧಿಗೆ ಮುಂದಾಗುತ್ತಾರೆಂಬ ಭರವಸೆ ನಂಜನಗೂಡಿನ ನಾಗರೀಕರಲ್ಲಿದೆ.
ನಗರಸಭೆಯ ನೂತನ ಆಯುಕ್ತರಾದ ವಿಜಯ್ ಅವರು ಮಾತನಾಡಿ, ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಪಡೆದಿರುವ ಪವಿತ್ರ ಪುಣ್ಯಕ್ಷೇತ್ರ ಈ ನಂಜುಂಡೇಶ್ವರನ ಸನ್ನಿಧಿಯಲ್ಲಿ ಎರಡನೇ ಬಾರಿಗೆ ಕೆಲಸ ಮಾಡುವ ಪುಣ್ಯ ಸಿಕ್ಕಿದೆ. ಹಾಗಾಗಿ ಕ್ಷೇತ್ರದ ಶಾಸಕರು, ಸಂಸದರು, ಸಚಿವರು ಸೇರಿದಂತೆ ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲಾ ಸದಸ್ಯರುಗಳು ಮತ್ತು ಸಹೋದ್ಯೋಗಿ ಅಧಿಕಾರಿಗಳ ಸಹಕಾರದಿಂದ ಉತ್ತಮ ಕೆಲಸ ಮಾಡಿ ನಗರಸಭೆ ಅಭಿವೃದ್ಧಿ ಗೆ ಶ್ರಮಿಸುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು