8:20 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ನಂಜನಗೂಡು: ಪವಾಡ ಪುರುಷ ಶ್ರೀ ಮಹದೇವ ತಾತ ಗದ್ದುಗೆಯಲ್ಲಿ ವಿಶೇಷ ಪೂಜೆ

01/12/2024, 19:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸ ದ ಅಮಾವಾಸ್ಯೆ ಹಿನ್ನೆಲೆ ಇಂದು ನಂಜನಗೂಡು ತಾಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ಸಂಗಮದಲ್ಲಿ ನಡೆದಾಡಿದ ದೇವರು ಎಂದೇ ಕರೆಯಲ್ಪಡುವ ಪವಾಡಪುರುಷ ಶ್ರೀ ಮಹಾದೇವ ತಾತ ಅವರ ಗದ್ದುಗೆಯಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು.


ನಡೆದಾಡಿದ ದೇವರು ಎಂದೇ ಖ್ಯಾತಿ ಪಡೆದು ಹಲವಾರು ಪವಾಡಗಳ ಮುಖಾಂತರ ಪವಾಡ ಪುರುಷರಾಗಿ ಕೆಲ ವರ್ಷಗಳ ಕಾಲ ಇದೇ ಕ್ಷೇತ್ರದಲ್ಲಿ ಐಕ್ಯರಾದ ಶ್ರೀ ಮಹಾದೇವ ತಾತ ಅವರ ಗದ್ದುಗೆ ಇಂದು ಪವಿತ್ರ ಪುಣ್ಯಕ್ಷೇತ್ರವಾಗಿದೆ. ಬೆಳಿಗ್ಗೆಯಿಂದಲೇ ಗದ್ದುಗೆಯಲ್ಲಿ ರುದ್ರಾಭಿಷೇಕ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ಅವರ ಗದ್ದುಗೆ ಹಾಗೂ ಅವರ ಪುತ್ತಳಿಯನ್ನು ಬಗೆ ಬಗೆಯ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಲಾಗಿತ್ತು .ಅಲ್ಲದೆ ಶ್ರೀ ಅವರ ಉತ್ಸವ ಮೂರ್ತಿಯನ್ನು ಶ್ರೀ ಮಠದ ಸುತ್ತ ಮೆರವಣಿಗೆ ನಡೆಸಲಾಯಿತು.
ಉತ್ತರ ಕರ್ನಾಟಕವು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಶ್ರೀ ಅವರ ಪುಣ್ಯಕ್ಷೇತ್ರಕ್ಕೆ ಬಂದು ಕಪಿಲಾ ನದಿಯಲ್ಲಿ ಮಿಂದು ಶ್ರೀಯವರ ಗದ್ದುಗೆಗೆ ವಿಶೇಷ ಪೂಜೆ , ಹರಕೆ ಹಾಗೂ ಪ್ರಾರ್ಥನೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ಇದೇ ಸಂದರ್ಭ ಶ್ರೀ ಮಹಾದೇವ ತಾತ ಅವರು ವಾಸಿಸುತ್ತಿದ್ದ ಪುಟ್ಟ ಮನೆ ಅವರು ಉಪಯೋಗಿಸುತ್ತಿದ್ದ ವಸ್ತುಗಳನ್ನು ಸಹ ಭಕ್ತರು ಕಣ್ತುಂಬಿಕೊಂಡು ಭಕ್ತಿ ನಮನ ಸಲ್ಲಿಸಿದರು. ಪೂಜೆಗೆ ಬಂದ ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಶ್ರೀ ಕ್ಷೇತ್ರದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.
ಶ್ರೀ ಕ್ಷೇತ್ರದ ಅಧ್ಯಕ್ಷರಾದ ಶಿವರಾಜಪ್ಪ ಹಾಗೂ ಭಕ್ತರು ಮಾತನಾಡಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು