11:48 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ನಂಜನಗೂಡು: ಪವಾಡ ಪುರುಷ ಶ್ರೀ ಮಹದೇವ ತಾತ ಗದ್ದುಗೆಯಲ್ಲಿ ವಿಶೇಷ ಪೂಜೆ

01/12/2024, 19:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸ ದ ಅಮಾವಾಸ್ಯೆ ಹಿನ್ನೆಲೆ ಇಂದು ನಂಜನಗೂಡು ತಾಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ಸಂಗಮದಲ್ಲಿ ನಡೆದಾಡಿದ ದೇವರು ಎಂದೇ ಕರೆಯಲ್ಪಡುವ ಪವಾಡಪುರುಷ ಶ್ರೀ ಮಹಾದೇವ ತಾತ ಅವರ ಗದ್ದುಗೆಯಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು.


ನಡೆದಾಡಿದ ದೇವರು ಎಂದೇ ಖ್ಯಾತಿ ಪಡೆದು ಹಲವಾರು ಪವಾಡಗಳ ಮುಖಾಂತರ ಪವಾಡ ಪುರುಷರಾಗಿ ಕೆಲ ವರ್ಷಗಳ ಕಾಲ ಇದೇ ಕ್ಷೇತ್ರದಲ್ಲಿ ಐಕ್ಯರಾದ ಶ್ರೀ ಮಹಾದೇವ ತಾತ ಅವರ ಗದ್ದುಗೆ ಇಂದು ಪವಿತ್ರ ಪುಣ್ಯಕ್ಷೇತ್ರವಾಗಿದೆ. ಬೆಳಿಗ್ಗೆಯಿಂದಲೇ ಗದ್ದುಗೆಯಲ್ಲಿ ರುದ್ರಾಭಿಷೇಕ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ಅವರ ಗದ್ದುಗೆ ಹಾಗೂ ಅವರ ಪುತ್ತಳಿಯನ್ನು ಬಗೆ ಬಗೆಯ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಲಾಗಿತ್ತು .ಅಲ್ಲದೆ ಶ್ರೀ ಅವರ ಉತ್ಸವ ಮೂರ್ತಿಯನ್ನು ಶ್ರೀ ಮಠದ ಸುತ್ತ ಮೆರವಣಿಗೆ ನಡೆಸಲಾಯಿತು.
ಉತ್ತರ ಕರ್ನಾಟಕವು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಶ್ರೀ ಅವರ ಪುಣ್ಯಕ್ಷೇತ್ರಕ್ಕೆ ಬಂದು ಕಪಿಲಾ ನದಿಯಲ್ಲಿ ಮಿಂದು ಶ್ರೀಯವರ ಗದ್ದುಗೆಗೆ ವಿಶೇಷ ಪೂಜೆ , ಹರಕೆ ಹಾಗೂ ಪ್ರಾರ್ಥನೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ಇದೇ ಸಂದರ್ಭ ಶ್ರೀ ಮಹಾದೇವ ತಾತ ಅವರು ವಾಸಿಸುತ್ತಿದ್ದ ಪುಟ್ಟ ಮನೆ ಅವರು ಉಪಯೋಗಿಸುತ್ತಿದ್ದ ವಸ್ತುಗಳನ್ನು ಸಹ ಭಕ್ತರು ಕಣ್ತುಂಬಿಕೊಂಡು ಭಕ್ತಿ ನಮನ ಸಲ್ಲಿಸಿದರು. ಪೂಜೆಗೆ ಬಂದ ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಶ್ರೀ ಕ್ಷೇತ್ರದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.
ಶ್ರೀ ಕ್ಷೇತ್ರದ ಅಧ್ಯಕ್ಷರಾದ ಶಿವರಾಜಪ್ಪ ಹಾಗೂ ಭಕ್ತರು ಮಾತನಾಡಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು