10:43 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ನಂಜನಗೂಡು: ಪವಾಡ ಪುರುಷ ಶ್ರೀ ಮಹದೇವ ತಾತ ಗದ್ದುಗೆಯಲ್ಲಿ ವಿಶೇಷ ಪೂಜೆ

01/12/2024, 19:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸ ದ ಅಮಾವಾಸ್ಯೆ ಹಿನ್ನೆಲೆ ಇಂದು ನಂಜನಗೂಡು ತಾಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ಸಂಗಮದಲ್ಲಿ ನಡೆದಾಡಿದ ದೇವರು ಎಂದೇ ಕರೆಯಲ್ಪಡುವ ಪವಾಡಪುರುಷ ಶ್ರೀ ಮಹಾದೇವ ತಾತ ಅವರ ಗದ್ದುಗೆಯಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು.


ನಡೆದಾಡಿದ ದೇವರು ಎಂದೇ ಖ್ಯಾತಿ ಪಡೆದು ಹಲವಾರು ಪವಾಡಗಳ ಮುಖಾಂತರ ಪವಾಡ ಪುರುಷರಾಗಿ ಕೆಲ ವರ್ಷಗಳ ಕಾಲ ಇದೇ ಕ್ಷೇತ್ರದಲ್ಲಿ ಐಕ್ಯರಾದ ಶ್ರೀ ಮಹಾದೇವ ತಾತ ಅವರ ಗದ್ದುಗೆ ಇಂದು ಪವಿತ್ರ ಪುಣ್ಯಕ್ಷೇತ್ರವಾಗಿದೆ. ಬೆಳಿಗ್ಗೆಯಿಂದಲೇ ಗದ್ದುಗೆಯಲ್ಲಿ ರುದ್ರಾಭಿಷೇಕ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ಅವರ ಗದ್ದುಗೆ ಹಾಗೂ ಅವರ ಪುತ್ತಳಿಯನ್ನು ಬಗೆ ಬಗೆಯ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಲಾಗಿತ್ತು .ಅಲ್ಲದೆ ಶ್ರೀ ಅವರ ಉತ್ಸವ ಮೂರ್ತಿಯನ್ನು ಶ್ರೀ ಮಠದ ಸುತ್ತ ಮೆರವಣಿಗೆ ನಡೆಸಲಾಯಿತು.
ಉತ್ತರ ಕರ್ನಾಟಕವು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಶ್ರೀ ಅವರ ಪುಣ್ಯಕ್ಷೇತ್ರಕ್ಕೆ ಬಂದು ಕಪಿಲಾ ನದಿಯಲ್ಲಿ ಮಿಂದು ಶ್ರೀಯವರ ಗದ್ದುಗೆಗೆ ವಿಶೇಷ ಪೂಜೆ , ಹರಕೆ ಹಾಗೂ ಪ್ರಾರ್ಥನೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ಇದೇ ಸಂದರ್ಭ ಶ್ರೀ ಮಹಾದೇವ ತಾತ ಅವರು ವಾಸಿಸುತ್ತಿದ್ದ ಪುಟ್ಟ ಮನೆ ಅವರು ಉಪಯೋಗಿಸುತ್ತಿದ್ದ ವಸ್ತುಗಳನ್ನು ಸಹ ಭಕ್ತರು ಕಣ್ತುಂಬಿಕೊಂಡು ಭಕ್ತಿ ನಮನ ಸಲ್ಲಿಸಿದರು. ಪೂಜೆಗೆ ಬಂದ ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಶ್ರೀ ಕ್ಷೇತ್ರದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.
ಶ್ರೀ ಕ್ಷೇತ್ರದ ಅಧ್ಯಕ್ಷರಾದ ಶಿವರಾಜಪ್ಪ ಹಾಗೂ ಭಕ್ತರು ಮಾತನಾಡಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು