8:01 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಂಜನಗೂಡು: ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಹುಟ್ಟು ಹಬ್ಬದ ಪ್ರಯುಕ್ತ ರೈತರ ಜನಜಾಗೃತಿ ಸಭೆ

14/02/2025, 15:41

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಏಕೀಕರಣದ ಹಾದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಹಸಿರುಸೇನಾನಿ ರೈತ ನಾಯಕ ಪ್ರೊ. ನಂಜುಂಡಸ್ವಾಮಿಯವರ 89ನೇ ಜನ್ಮದಿನಾಚರಣೆ ಅಂಗವಾಗಿ ನಂಜನಗೂಡು ತಾಲೂಕಿನ ಕವಲಂದೆ ಹೋಬಳಿ ಮಟ್ಟದ ರೈತರ ಜನಜಾಗೃತಿ ಸಭೆಯನ್ನು ಮಲ್ಲಹಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಲಾಗಿಯಿತು.
ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಪ್ರಾಸ್ತಾವಿಕವಾಗಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ರೈತರು ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಬೇಡ ರೈತ ಸಂಘ ನಿಮ್ಮೊಟ್ಟಿಗೆ ಇದೆ ಹೆದರಬೇಡಿ ಎಂಬ ಧೈರ್ಯ ತುಂಬುವ ಮಾತುಗಳನ್ನಾಡಿ ಯಾವುದೇ ಬ್ಯಾಂಕ್, ಮೈಕ್ರೋ ಫೈನಾನ್ಸ್ ಅಥವಾ ಖಾಸಗಿ ವ್ಯಕ್ತಿಗಳಿಂದ ಹೆಚ್ಚಿನ ಬಡ್ಡಿಗೆ ಸಿಲುಕಿ ಕಿರುಕುಳ ನೀಡಿದರೆ ನಮ್ಮ ಗಮನಕ್ಕೆ ತನ್ನಿ ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಕಿವಿಮಾತು ಹೇಳುವ ಮೂಲಕ ರೈತರ ಹೋರಾಟದ ಬಗ್ಗೆ ವಿವರಿಸಿದರು.
ಪ್ರೊ. ನಂಜುಂಡಸ್ವಾಮಿಯವರ ಪುತ್ರ ಪಚ್ಚೆನಂಜುಂಡಸ್ವಾಮಿ ಮಾತನಾಡಿ ರಾಜ್ಯದಲ್ಲೇ ಮೊದಲಿಗೆ ರೈತರ ಸಾಲ ಮನ್ನಾ, ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಸೇರಿದಂತೆ ಹಲವಾರು ರೈತ ಪರ ಕಾರ್ಯಕ್ರಮಗಳನ್ನು ತಮ್ಮ ಹೋರಾಟದ ಮೂಲಕ ಜಾರಿಗೆ ತಂದ ಮಹಾನ್ ಹೋರಾಟಗಾರರಾಗಿದ್ದವರು ನಂಜುಂಡಸ್ವಾಮಿಯವರು ಹಾಗಾಗಿ ಇಂದು ಇಡೀ ರಾಜ್ಯದ್ಯಂತ ಹಳ್ಳಿ ಹಳ್ಳಿಗಳಲ್ಲಿ ರೈತರು ಸ್ವಯಂ ಪ್ರೇರಣೆಯಿಂದ ಅವರ ಜನ್ಮದಿನಾಚರಣೆಯನ್ನು ರೈತೋತ್ಸವ ದಿನವೆಂದು ಆಚರಣೆ ಮಾಡುತ್ತಿದ್ದಾರೆ ಎಂದರು.
ರೈತರ ಹಕ್ಕು ಮತ್ತು ಸಮಸ್ಯೆಗಳಿಗೆ ರೈತ ಸಂಘಟನೆ ಒಂದೇ ಪರಿಹಾರ ಅದಕ್ಕಾಗಿ ರೈತರು ಒಗ್ಗಟ್ಟಾಗಿ ರೈತ ಸಂಘಟನೆಗೆ ಬನ್ನಿ ಎಂದು ಕರೆ ನೀಡಿದರು.


ಇದೇ ಸಂದರ್ಭ ಗ್ರಾಮದ ಹಲವಾರು ಮುಖಂಡರು ರೈತ ಸಂಘಟನೆ ಸೇರ್ಪಡೆಗೊಂಡರು.
ಸೇರ್ಪಡೆಗೊಂಡ ಮುಖಂಡರನ್ನು ವೇದಿಕೆ ಮೇಲಿನ ಗಣ್ಯರು ಹಸಿರು ಶಾಲು ಹೋದಿಸುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಸಾಹಿತಿ ಕಾಳೇಗೌಡ ನಾಗವಾರ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿಮ್ಮಾವುರಘು,ತಾಲೂಕು ಅಧ್ಯಕ್ಷ ಸತೀಶ್ ರಾವ್ , ಮುಖಂಡರುಗಳಾದ ಬಂಗಾರಸ್ವಾಮಿ, ಕಳ್ಳಿಪುರ ಮಹದೇವಸ್ವಾಮಿ, ಶ್ವೇತಾ, ಶಿವಣ್ಣ, ಕೆಂಪಣ್ಣ , ರವಿ, ತಿಮ್ಮಣ್ಣ ,ಮಾದನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು