1:14 PM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ನಂಜನಗೂಡು: ರಸ್ತೆ ದುರಸ್ತಿಗಾಗಿ ಗ್ರಾಮಸ್ಥರ ಜಾಥಾ; ಪಿಡಬ್ಲ್ಯುಡಿ ಇಲಾಖೆ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ

01/08/2024, 21:29

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಗುಂಡಿಯಲ್ಲಿ ರಸ್ತೆಯೋ, ರಸ್ತೆಯಲ್ಲಿ ಗುಂಡಿಯೋ ಎಂಬಂತೆ ಹಳ್ಳ ಗುಂಡಿ ಬಿದ್ದು ಕಿತ್ತು ಹೋಗಿರುವ ದೇವರಸನಹಳ್ಳಿ ಮುಖ್ಯರಸ್ತೆಯನ್ನು ಕೂಡಲೇ ದುರಸ್ತಿಪಡಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಪಾದಯಾತ್ರೆ ನಡೆಸಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುವ ಮೂಲಕ ನಂಜನಗೂಡಿನಲ್ಲಿ ಪ್ರತಿಭಟನೆ ನಡೆಸಿದರು.


ಪಟ್ಟಣದ ಹಳ್ಳದ ಕೇರಿಯಿಂದ ಪ್ರತಿಭಟನಾ ಜಾಥಾ ಹೊರಟ ಆ ಭಾಗದ ಗ್ರಾಮಸ್ಥರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಸ್ತೆ ದುರಸ್ತಿ ಪಡಿಸುವಂತೆ ಒತ್ತಾಯಿಸಿ ನಾಮಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಸಾಗಿದರು
ದೇಣಿಗೆಯ ಡಬ್ಬ ಹಿಡಿದು ಸಾರ್ವಜನಿಕರು ರಸ್ತೆ ದುರಸ್ತಿಗೆ ಹಣ ಸಹಾಯ ಮಾಡಿ ಎಂದು ಸರ್ಕಾರದ ವಿರುದ್ಧ ಅಣುಕು ಪ್ರದರ್ಶನ ಸಹ ಮಾಡಿದರು
ದೇವರಸನಹಳ್ಳಿ, ಹೊಸೂರು, ಉಪ್ಪಿನ ಹಳ್ಳಿ
ಸಿಂಗಾರಿಪುರ , ಶ್ರೀನಗರ ಹಾಗೂ ಮಾಡ್ರಳ್ಳಿ ಗ್ರಾಮಸ್ಥರು ಆ ಭಾಗದ ಆಟೋ ಚಾಲಕರು ಜಾಥಾ ನಡೆಸಿ ಬಳಿಕ ಲೋಕೋಪಯೋಗಿ ಇಲಾಖೆ ಮುಂಭಾಗ ಜಮಾಯಿಸಿ ಪ್ರತಿಭಟನೆ ನಡೆಸಿದರು.
ಸರ್ಕಾರ ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಗ್ರಾಮದ ಮುಖಂಡ ಮಹದೇವ್ ಹಾಗೂ ದೇವರಾಜ್ ಮಾತನಾಡಿ, ಹಲವಾರು ವರ್ಷಗಳಿಂದ ಯಾವುದೇ ಸರ್ಕಾರಗಳು ಹಾಗೂ ಶಾಸಕರು ಬಂದರೂ ಈ ರಸ್ತೆಯನ್ನು ದುರಸ್ತಿ ಪಡಿಸದೆ ಇರುವುದರಿಂದ ರಸ್ತೆಯಲ್ಲಿ ಹಳ್ಳ ಕೊಳ್ಳಗಳು ಗುಂಡಿಗಳು ಬಿದ್ದು ತಿರುಗಾಡುವುದಕ್ಕೆ ಯೋಗ್ಯವಾಗಿಲ್ಲ ಇದರಿಂದ ವಿದ್ಯಾರ್ಥಿಗಳಿಗೆ, ವಯೋವೃದ್ದರಿಗೆ, ಗರ್ಭಿಣಿ ಬಾಣಂತಿಯರಿಗೆ ತಿರುಗಾಡಲು ತೊಂದರೆಯಾಗಿದೆ. ಅಲ್ಲದೆ ಹಲವರು ರಸ್ತೆಯಲ್ಲಿ ಬಿದ್ದು ಗಾಯಗೊಂಡಿರುತ್ತಾರೆ. ಈಗಾಗಲೇ ನೂತನ ಶಾಸಕರಾದಿಯಾಗಿ ಸಿಎಂ ಸಿದ್ದರಾಮಯ್ಯನವರೆಗೂ ಮನವಿ ನೀಡಿ ಸಾಕಾಗಿದೆ. ಹಾಗಾಗಿ ಇನ್ನು 40 ದಿನಗಳ ಒಳಗಾಗಿ ಈ ರಸ್ತೆಯನ್ನು ದುರಸ್ತಿ ಪಡಿಸದೆ ಹೋದಲ್ಲಿ ನಂಜನಗೂಡು ಬಂದ್ ಮಾಡಿ ಪ್ರತಿನಿತ್ಯ ಲೋಕೋಪಯೋಗಿ ಇಲಾಖೆ ಕಚೇರಿ ಮುಂಭಾಗ ನಿರಂತರವಾಗಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿ ಪ್ರತಿಭಟನೆಯ ಬಗ್ಗೆ ತಿಳಿಸಿದರು.
ನಂತರ ತಹಸೀಲ್ದಾರ್ ಕಚೇರಿ ಅಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ರಸ್ತೆ ದುರಸ್ತಿಗೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೆಂಕಟೇಶ್ ಸದಸ್ಯರುಗಳಾದ ಗೋವರ್ಧನ್, ಮಂಜುನಾಥ್ , ಸ್ವಾಮಿ ಗೌಡ, ಮಾಡ್ರಳ್ಳಿ ಮಲ್ಲೇಶ್, ಕೃಷ್ಣ, ಉಪ್ಪಿನಳ್ಳಿ ಮಹದೇವ್, ಸಿಂಗಾರಿಪುರ ಸುಂದರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು