1:38 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ನಂಜನಗೂಡು: ರಸ್ತೆ ದುರಸ್ತಿಗಾಗಿ ಗ್ರಾಮಸ್ಥರ ಜಾಥಾ; ಪಿಡಬ್ಲ್ಯುಡಿ ಇಲಾಖೆ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ

01/08/2024, 21:29

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಗುಂಡಿಯಲ್ಲಿ ರಸ್ತೆಯೋ, ರಸ್ತೆಯಲ್ಲಿ ಗುಂಡಿಯೋ ಎಂಬಂತೆ ಹಳ್ಳ ಗುಂಡಿ ಬಿದ್ದು ಕಿತ್ತು ಹೋಗಿರುವ ದೇವರಸನಹಳ್ಳಿ ಮುಖ್ಯರಸ್ತೆಯನ್ನು ಕೂಡಲೇ ದುರಸ್ತಿಪಡಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಪಾದಯಾತ್ರೆ ನಡೆಸಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುವ ಮೂಲಕ ನಂಜನಗೂಡಿನಲ್ಲಿ ಪ್ರತಿಭಟನೆ ನಡೆಸಿದರು.


ಪಟ್ಟಣದ ಹಳ್ಳದ ಕೇರಿಯಿಂದ ಪ್ರತಿಭಟನಾ ಜಾಥಾ ಹೊರಟ ಆ ಭಾಗದ ಗ್ರಾಮಸ್ಥರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಸ್ತೆ ದುರಸ್ತಿ ಪಡಿಸುವಂತೆ ಒತ್ತಾಯಿಸಿ ನಾಮಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಸಾಗಿದರು
ದೇಣಿಗೆಯ ಡಬ್ಬ ಹಿಡಿದು ಸಾರ್ವಜನಿಕರು ರಸ್ತೆ ದುರಸ್ತಿಗೆ ಹಣ ಸಹಾಯ ಮಾಡಿ ಎಂದು ಸರ್ಕಾರದ ವಿರುದ್ಧ ಅಣುಕು ಪ್ರದರ್ಶನ ಸಹ ಮಾಡಿದರು
ದೇವರಸನಹಳ್ಳಿ, ಹೊಸೂರು, ಉಪ್ಪಿನ ಹಳ್ಳಿ
ಸಿಂಗಾರಿಪುರ , ಶ್ರೀನಗರ ಹಾಗೂ ಮಾಡ್ರಳ್ಳಿ ಗ್ರಾಮಸ್ಥರು ಆ ಭಾಗದ ಆಟೋ ಚಾಲಕರು ಜಾಥಾ ನಡೆಸಿ ಬಳಿಕ ಲೋಕೋಪಯೋಗಿ ಇಲಾಖೆ ಮುಂಭಾಗ ಜಮಾಯಿಸಿ ಪ್ರತಿಭಟನೆ ನಡೆಸಿದರು.
ಸರ್ಕಾರ ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಗ್ರಾಮದ ಮುಖಂಡ ಮಹದೇವ್ ಹಾಗೂ ದೇವರಾಜ್ ಮಾತನಾಡಿ, ಹಲವಾರು ವರ್ಷಗಳಿಂದ ಯಾವುದೇ ಸರ್ಕಾರಗಳು ಹಾಗೂ ಶಾಸಕರು ಬಂದರೂ ಈ ರಸ್ತೆಯನ್ನು ದುರಸ್ತಿ ಪಡಿಸದೆ ಇರುವುದರಿಂದ ರಸ್ತೆಯಲ್ಲಿ ಹಳ್ಳ ಕೊಳ್ಳಗಳು ಗುಂಡಿಗಳು ಬಿದ್ದು ತಿರುಗಾಡುವುದಕ್ಕೆ ಯೋಗ್ಯವಾಗಿಲ್ಲ ಇದರಿಂದ ವಿದ್ಯಾರ್ಥಿಗಳಿಗೆ, ವಯೋವೃದ್ದರಿಗೆ, ಗರ್ಭಿಣಿ ಬಾಣಂತಿಯರಿಗೆ ತಿರುಗಾಡಲು ತೊಂದರೆಯಾಗಿದೆ. ಅಲ್ಲದೆ ಹಲವರು ರಸ್ತೆಯಲ್ಲಿ ಬಿದ್ದು ಗಾಯಗೊಂಡಿರುತ್ತಾರೆ. ಈಗಾಗಲೇ ನೂತನ ಶಾಸಕರಾದಿಯಾಗಿ ಸಿಎಂ ಸಿದ್ದರಾಮಯ್ಯನವರೆಗೂ ಮನವಿ ನೀಡಿ ಸಾಕಾಗಿದೆ. ಹಾಗಾಗಿ ಇನ್ನು 40 ದಿನಗಳ ಒಳಗಾಗಿ ಈ ರಸ್ತೆಯನ್ನು ದುರಸ್ತಿ ಪಡಿಸದೆ ಹೋದಲ್ಲಿ ನಂಜನಗೂಡು ಬಂದ್ ಮಾಡಿ ಪ್ರತಿನಿತ್ಯ ಲೋಕೋಪಯೋಗಿ ಇಲಾಖೆ ಕಚೇರಿ ಮುಂಭಾಗ ನಿರಂತರವಾಗಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿ ಪ್ರತಿಭಟನೆಯ ಬಗ್ಗೆ ತಿಳಿಸಿದರು.
ನಂತರ ತಹಸೀಲ್ದಾರ್ ಕಚೇರಿ ಅಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ರಸ್ತೆ ದುರಸ್ತಿಗೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೆಂಕಟೇಶ್ ಸದಸ್ಯರುಗಳಾದ ಗೋವರ್ಧನ್, ಮಂಜುನಾಥ್ , ಸ್ವಾಮಿ ಗೌಡ, ಮಾಡ್ರಳ್ಳಿ ಮಲ್ಲೇಶ್, ಕೃಷ್ಣ, ಉಪ್ಪಿನಳ್ಳಿ ಮಹದೇವ್, ಸಿಂಗಾರಿಪುರ ಸುಂದರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು