4:52 AM Friday10 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ನಂಜನಗೂಡು: ಸಡಗರ- ಸಂಭ್ರಮ, ಶ್ರದ್ಧಾ ಭಕ್ತಿಯಿಂದ ನಡೆದ ಶ್ರಾವಣ ಮಾಸದ ಪೂಜೆ

12/08/2024, 07:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ಶ್ರೀ ಶನೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.


ಮೈಸೂರು ಮಾನಂದವಾಡಿ ಹೆದ್ದಾರಿಯ ಕಂಚಮಳ್ಳಿ ಗೇಟ್ ಬಳಿ ಶ್ರೀ ಶನೇಶ್ವರ ಸ್ವಾಮಿ ಪುಣ್ಯಕ್ಷೇತ್ರವಿದೆ. ಶ್ರಾವಣ ಮಾಸದ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ದೇವಾಲಯದ ಆವರಣದಲ್ಲಿ ಶ್ರೀ ಶನೇಶ್ವರ ಸ್ವಾಮಿ ಸೇರಿದಂತೆ ದೇವಾನುದೇವತೆಗಳ ಹಾಗೂ ಶಿವಶರಣರ ಪುತ್ಥಳಿಗಳು ರಾರಾಜಿಸಿ ದೇವಾಲಯಕ್ಕೆ ಕಳೆ ತಂದಿದ್ದವು. ಸಂಜೆ 4:00 ಗಂಟೆ ವೇಳೆಗೆ ಕಪಿಲಾ ನದಿ ತೀರದಿಂದ ಹಾಲರವಿ ಉತ್ಸವ ದೊಂದಿಗೆ ಮಂಗಳವಾದ್ಯ, ವೀರಗಾಸೆ ಕುಣಿತ, ತಮಟೆ ಹಾಗೂ ನಗಾರಿ ವಾದ್ಯಗಳೊಂದಿಗೆ ಶ್ರೀ ಶನೇಶ್ವರ ಸ್ವಾಮಿಯವರ ಉತ್ಸವ ಮೂರ್ತಿ ಹಾಗೂ ಪುತ್ತಳಿಯನ್ನು ಮೆರವಣಿಗೆ ಮೂಲಕ ದೇವಾಲಯಕ್ಕೆ ತರಲಾಯಿತು ನಂತರ ಸ್ವಾಮಿಗೆ ಮಹಾಮಂಗಳಾರತಿ ನಡೆಯಿತು
ಇದೇ ಸಂದರ್ಭ ಶ್ರೀ ಕ್ಷೇತ್ರದ ನೂತನ ದೇವಾಲಯದ ಕಳಸ ಪ್ರತಿಷ್ಠಾಪನೆಯನ್ನು ಹಾಗೂ ಶ್ರೀ ಕ್ಷೇತ್ರದಲ್ಲಿ ಶ್ರೀ ಶನೇಶ್ವರ ಸ್ವಾಮಿಯವರ 56 ಅಡಿ ಎತ್ತರದ ಬೃಹತ್ ಪುತ್ತಳಿ ಸ್ಥಾಪನೆಗೆ ಶಾಸಕ ಅನಿಲ್ ಚಿಕ್ಕಮಾದು ಗುದ್ದಲಿ ಪೂಜೆ ನೆರವೇರಿಸಿದರು.
ಮೈಸೂರು, ನಂಜನಗೂಡು, ಎಚ್ ಡಿ ಕೋಟೆ, ಗುಂಡ್ಲುಪೇಟೆ ಸೇರಿದಂತೆ ವಿವಿಧ ತಾಲೂಕುಗಳಿಂದ ಸಾವಿರಾರು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು.
ಬಂದ ಎಲ್ಲಾ ಭಕ್ತರಿಗೆ ಮೈಸೂರಿನ ಶಿವಣ್ಣ ಹಾಗೂ ಕುಟುಂಬದವರಿಂದ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಶಾಸಕ ಅನಿಲ್ ಚಿಕ್ಕಮಾದು ಹಾಗೂ ದಾನಿ ಶಿವಣ್ಣ ಕುಟುಂಬದವರನ್ನು ದೇವಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ಶಾಸಕ ಅನಿಲ್ ಚಿಕ್ಕಮಾದು ಹಾಗೂ ದೇವಾಲಯದ ಗುಡ್ಡಪ್ಪ ಕುಮಾರಸ್ವಾಮಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು