3:30 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಂಜನಗೂಡು: ಸಡಗರ- ಸಂಭ್ರಮ, ಶ್ರದ್ಧಾ ಭಕ್ತಿಯಿಂದ ನಡೆದ ಶ್ರಾವಣ ಮಾಸದ ಪೂಜೆ

12/08/2024, 07:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ಶ್ರೀ ಶನೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.


ಮೈಸೂರು ಮಾನಂದವಾಡಿ ಹೆದ್ದಾರಿಯ ಕಂಚಮಳ್ಳಿ ಗೇಟ್ ಬಳಿ ಶ್ರೀ ಶನೇಶ್ವರ ಸ್ವಾಮಿ ಪುಣ್ಯಕ್ಷೇತ್ರವಿದೆ. ಶ್ರಾವಣ ಮಾಸದ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ದೇವಾಲಯದ ಆವರಣದಲ್ಲಿ ಶ್ರೀ ಶನೇಶ್ವರ ಸ್ವಾಮಿ ಸೇರಿದಂತೆ ದೇವಾನುದೇವತೆಗಳ ಹಾಗೂ ಶಿವಶರಣರ ಪುತ್ಥಳಿಗಳು ರಾರಾಜಿಸಿ ದೇವಾಲಯಕ್ಕೆ ಕಳೆ ತಂದಿದ್ದವು. ಸಂಜೆ 4:00 ಗಂಟೆ ವೇಳೆಗೆ ಕಪಿಲಾ ನದಿ ತೀರದಿಂದ ಹಾಲರವಿ ಉತ್ಸವ ದೊಂದಿಗೆ ಮಂಗಳವಾದ್ಯ, ವೀರಗಾಸೆ ಕುಣಿತ, ತಮಟೆ ಹಾಗೂ ನಗಾರಿ ವಾದ್ಯಗಳೊಂದಿಗೆ ಶ್ರೀ ಶನೇಶ್ವರ ಸ್ವಾಮಿಯವರ ಉತ್ಸವ ಮೂರ್ತಿ ಹಾಗೂ ಪುತ್ತಳಿಯನ್ನು ಮೆರವಣಿಗೆ ಮೂಲಕ ದೇವಾಲಯಕ್ಕೆ ತರಲಾಯಿತು ನಂತರ ಸ್ವಾಮಿಗೆ ಮಹಾಮಂಗಳಾರತಿ ನಡೆಯಿತು
ಇದೇ ಸಂದರ್ಭ ಶ್ರೀ ಕ್ಷೇತ್ರದ ನೂತನ ದೇವಾಲಯದ ಕಳಸ ಪ್ರತಿಷ್ಠಾಪನೆಯನ್ನು ಹಾಗೂ ಶ್ರೀ ಕ್ಷೇತ್ರದಲ್ಲಿ ಶ್ರೀ ಶನೇಶ್ವರ ಸ್ವಾಮಿಯವರ 56 ಅಡಿ ಎತ್ತರದ ಬೃಹತ್ ಪುತ್ತಳಿ ಸ್ಥಾಪನೆಗೆ ಶಾಸಕ ಅನಿಲ್ ಚಿಕ್ಕಮಾದು ಗುದ್ದಲಿ ಪೂಜೆ ನೆರವೇರಿಸಿದರು.
ಮೈಸೂರು, ನಂಜನಗೂಡು, ಎಚ್ ಡಿ ಕೋಟೆ, ಗುಂಡ್ಲುಪೇಟೆ ಸೇರಿದಂತೆ ವಿವಿಧ ತಾಲೂಕುಗಳಿಂದ ಸಾವಿರಾರು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು.
ಬಂದ ಎಲ್ಲಾ ಭಕ್ತರಿಗೆ ಮೈಸೂರಿನ ಶಿವಣ್ಣ ಹಾಗೂ ಕುಟುಂಬದವರಿಂದ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಶಾಸಕ ಅನಿಲ್ ಚಿಕ್ಕಮಾದು ಹಾಗೂ ದಾನಿ ಶಿವಣ್ಣ ಕುಟುಂಬದವರನ್ನು ದೇವಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ಶಾಸಕ ಅನಿಲ್ ಚಿಕ್ಕಮಾದು ಹಾಗೂ ದೇವಾಲಯದ ಗುಡ್ಡಪ್ಪ ಕುಮಾರಸ್ವಾಮಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು