6:43 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಭೀಮಾ ಕೋರೆಗಾಂವ್ ವಿಜಯೋತ್ಸವ: ಬೃಹತ್ ಸಮಾವೇಶ; ನಟ ಚೇತನ್ ಭಾಗಿ

07/01/2024, 21:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಂ

ನಂಜನಗೂಡು ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಲಾಗಿದ್ದ ಭೀಮಾ ಕೋರೆಗಾಂವ್ ವಿಜಯೋತ್ಸವ ಅಂಗವಾಗಿ ಸ್ವಾಭಿಮಾನದ ನಡಿಗೆ ಪ್ರಬುದ್ಧ ಭಾರತದ ಕಡೆಗೆ ಎಂಬ ಸಮಾವೇಶವನ್ನು ನಟ ಚೇತನ್ ಅಹಿಂಸ ಉದ್ಘಾಟಿಸಿದರು.
ಇದಕ್ಕೂ ಮುನ್ನ ನಂಜನಗೂಡಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಜಾಗೃತಿ ರಥಕ್ಕೆ ಪ್ರಗತಿಪರ ಚಿಂತಕ ಮಹೇಶ್ ಚಂದ್ರ ಗುರು ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.


ನಂಜನಗೂಡಿನ ಆರ್. ಪಿ. ರಸ್ತೆಯ ಮೂಲಕ ಅಂಬೇಡ್ಕರ್ ವೃತ್ತದ ವರೆಗೆ ಬೃಹತ್ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದವು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು.
ಬಳಿಕ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ದಿವಂಗತ ಬಸವಲಿಂಗಪ್ಪ ವೇದಿಕೆಯಲ್ಲಿ ಬುದ್ಧ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಟ ಚೇತನ್ ಅಹಿಂಸ ಪುಷ್ಪಾರ್ಚನೆ ಮಾಡುವ ಮೂಲಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾನತೆ ಪರಿವರ್ತನೆ ನಮ್ಮ ಸಿದ್ಧಾಂತವಾಗಬೇಕು. ಅನ್ಯಾಯದ ಪರವಾಗಿ ನಿಂತರೆ, ಸತ್ಯ ಹೇಳಲು ನಮ್ಮಲ್ಲಿ ಧೈರ್ಯ ಇರಬೇಕಿದೆ. ನ್ಯಾಯದ ವಿರುದ್ಧ ಮಾತನಾಡಿದರೆ ಸತ್ಯ ಹೇಳಿದರೆ ನಮಗೆ ಜೀವ ಬೆದರಿಕೆ ಹಾಕುತ್ತಾರೆ. ಸುಳ್ಳು ದೂರುಗಳನ್ನು ನೀಡುತ್ತಾರೆ.
ನಾವು ಧೈರ್ಯವಾಗಿ ಎದುರಿಸಲು ಸಿದ್ಧರಾಗಬೇಕು. ಅಂಬೇಡ್ಕರ್ ಅವರ ಮಾರ್ಗವನ್ನು ಅನುಸರಿಸಬೇಕು. ನಾವು ಪರಿವರ್ತನೆಯಾಗಬೇಕು ಸಮಾನತೆಯನ್ನು ಪ್ರತಿಪಾದಿಸಬೇಕು.
ನಾವು ಸತ್ಯ ಹೇಳಿ ಜೈಲಿಗೆ ಹೋಗಿದ್ದೇವೆ ಹೊರತು ಸುಳ್ಳು ಹೇಳಿ ಅಲ್ಲ. ಭೀಮ ಕೋರೆಂಗಾವ್ ಯುದ್ಧ ನಡೆದು ತುಂಬಾ ವರ್ಷಗಳೇ ಆಗಿದೆ. ನಮ್ಮ ಹಿರಿಯರು ಮಾಡಿದ ಹೋರಾಟ ಇನ್ನೂ ಕೂಡ ಜೀವಂತವಾಗಿದೆ.
ಸಮಾನತೆಗಾಗಿ ನಡೆದ ಹೋರಾಟವೆಂದರೆ ಅದು ಭೀಮ ಕೋರೆಂಗಾವ್ ವಿಜಯೋತ್ಸವ ಎಂದು ಹೇಳಿದರು.
ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅಭಿನಾಗಭೂಷನ್, ದಸಂಸ ಸಂಚಾಲಕರಾದ ಮಲ್ಲಹಳ್ಳಿ ನಾರಾಯಣ್, ಚುಂಚನಹಳ್ಳಿ ಮಲ್ಲೇಶ್, ವಿಜಯಕುಮಾರ್, ಕಾರ್ಯ ಬಸವಣ್ಣ, ಶಂಕರಪುರ ಸುರೇಶ್, ಪ್ರಶಾಂತ್, ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು