10:29 PM Monday27 - July 2026
ಬ್ರೇಕಿಂಗ್ ನ್ಯೂಸ್
ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ

ಇತ್ತೀಚಿನ ಸುದ್ದಿ

ನಂಜನಗೂಡು: ಸರಕಾರಿ ಶಾಲೆಯಲ್ಲಿ ದಾಖಲಾತಿ ಆಂದೋಲನ ಜಾಥಾ

03/06/2024, 20:40

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ಇವರ ಸಹಯೋಗದೊಂದಿಗೆ ನಂಜನಗೂಡು ಮತ್ತು ಎಚ್ ಡಿ ಕೋಟೆ ಗಡಿಯಂಚಿನ ಚಿಕ್ಕನಂದಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024 – 25 ನೇ ಸಾಲಿಗೆ ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ವಿವಿಧ ನಾಮಪ ಫಲಕಗಳನ್ನು ಹಿಡಿದು ಸೇರಿಸಿ ,ಸೇರಿಸಿ ಮಕ್ಕಳನ್ನು ಶಾಲೆಗೆ ಸೇರಿಸಿ ಎಂಬ ಘೋಷಣೆಗಳನ್ನು ಕೂಗುತ್ತಾ ಬ್ಯಾಂಡ್ ವಾದನದೊಂದಿಗೆ ಗ್ರಾಮದ ಬೀದಿ ಬೀದಿಗಳಿಗೆ ತೆರಳಿ ಸಾರ್ವಜನಿಕರು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಿದರು. ಬಳಿಕ ಸಹಶಿಕ್ಷಕ ಮಹದೇವಸ್ವಾಮಿ ಮಾತನಾಡಿ 2024 – 25ನೇ ಸಾಲಿಗೆ ಶಾಲೆ ಪ್ರಾರಂಭವಾಗಿದ್ದು ಇಂದು ಮತ್ತು ನಾಳೆ ಎರಡು ದಿನ ಶಾಲೆಗೆ ಸೇರದ ಹಾಗೂ ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸುವಂತೆ ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಶಾಲಾ ದಾಖಲಾತಿ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು