3:54 PM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ನಂಜನಗೂಡು: ಶಾಲಾ ನೂತನ ಕೊಠಡಿ ಸೋರಿಕೆ; ಅಧಿಕಾರಿಗಳಿಗೆ ಛೀಮಾರಿ ಹಾಕಿದ ಗ್ರಾಮಸ್ಥರು!

24/06/2024, 22:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹಣದ ದುರಾಸೆಗೆ ಗುತ್ತಿಗೆದಾರ ಮತ್ತು ಇಂಜಿನಿಯರ್ ಮಾಡಿದ ಎಡವಟ್ಟಿನಿಂದ ಶಾಲಾ ಮಕ್ಕಳು ಕೂತು ಪಾಠ ಕೇಳುವ ನೂತನ ಶಾಲಾ ಕೊಠಡಿ ಕಾಮಗಾರಿ ಮಳೆಗೆ ಸೋರುವಂತಾಗಿದೆ.
ಸಂಬಂಧಪಟ್ಟ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಗ್ರಾಮಕ್ಕೆ ಬರಮಾಡಿಕೊಂಡು ಗ್ರಾಮಸ್ಥರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಂಜನಗೂಡು ತಾಲೂಕಿನ ಇಬ್ಜಾಲ ಗ್ರಾಮದಲ್ಲಿ ನಡೆದಿದೆ.
2022-23ರ ಸಾಲಿನ ಅವಧಿಯಲ್ಲಿ ನಂಜನಗೂಡಿನ ಮಾಜಿ ಶಾಸಕ ಹರ್ಷವರ್ಧನ್ ಅವರ ಅವಧಿಯಲ್ಲಿ ಶಾಲಾ ಕೊಠಡಿಗಳ ಅಭಿವೃದ್ಧಿಗೆ 50 ಕೋಟಿಗೂ ಅಧಿಕ ಹಣವನ್ನು ಮಂಜೂರು ಮಾಡಿಸಿದ್ದರು.
ಜಿಲ್ಲಾ ಪಂಚಾಯಿತಿಯ ಎಂಜಿನಿಯರ್ ಇಲಾಖೆಯವರಿಗೆ ಕಾಮಗಾರಿಯ ಜವಾಬ್ದಾರಿಯನ್ನ ವಹಿಸಲಾಗಿತ್ತು. ನಂಜನಗೂಡು ತಾಲೂಕಿನ ಇಬ್ಜಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗೆ 14 ಲಕ್ಷಗಳ ಹಣವನ್ನು ಮಂಜೂರು ಮಾಡಿ ಜಿಪಂ ಎ ಇ ಇ ವೆಂಕಟೇಶ್ ಎಂಬುವರು ನಂಜನಗೂಡಿನ ಸ್ಥಳೀಯ ಗುತ್ತಿಗೆದಾರ ವ್ಯಕ್ತಿ ಒಬ್ಬರಿಗೆ ಯಾವುದೇ ಟೆಂಡರಿಲ್ಲದೆ ಕಾಮಗಾರಿಯ ಜವಾಬ್ದಾರಿ ವಹಿಸಿದ್ದರು.
ನೂತನ ಶಾಲಾ ಕೊಠಡಿ ಪೂರ್ಣಗೊಳ್ಳುವ ಮುನ್ನವೇ ಸಣ್ಣ ಪ್ರಮಾಣದ ಮಳೆ ಬಿದ್ದರೂ ಮೇಲ್ಚಾವಣಿ ಸೋರುತ್ತಿರುವ ಕಾರಣ ಇಬ್ಜಾಲ ಗ್ರಾಮಸ್ಥರು ಶಾಸಕ ದರ್ಶನ್ ಧ್ರುವನಾರಾಯಣ್ ಅವರ ಗಮನಕ್ಕೆ ವಿಚಾರ ಮುಟ್ಟಿಸಿದ್ದರು.
ಶಾಸಕರು ಕೂಡ ಸಂಬಂಧಪಟ್ಟ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಿ ಇಂಜಿನಿಯರ್ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು.
ಇಬ್ಜಾಲ ಗ್ರಾಮಸ್ಥರು ನಂಜನಗೂಡು ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ಮತ್ತು ಇಂಜಿನಿಯರ್ ಈರಯ್ಯ ಎಂಬುವರನ್ನು ಸೋರುತ್ತಿರುವ ಕೊಠಡಿ ಬಳಿ ಬರಮಾಡಿಕೊಂಡು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರ ಮಾತಿಗೆ ಉತ್ತರಿಸಲಾಗದ ಅಧಿಕಾರಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ನಂತರ ಮಾತನಾಡಿದ ಗ್ರಾಮಸ್ಥರು ಕಟ್ಟಡ ನಿರ್ಮಾಣದ ಸಂದರ್ಭದಲ್ಲಿ ಅಡಿಪಾಯವನ್ನು ಸರಿಯಾದ ರೀತಿಯಲ್ಲಿ ನಿರ್ಮಾಣ ಮಾಡದೇ ಕಳಪೆ ಪ್ರಮಾಣದಲ್ಲಿ ಸಿಮೆಂಟ್ ಮತ್ತು ಗುಣಮಟ್ಟದ ಡಸ್ಟ್ ಬಳಕೆ ಮಾಡದೆ ಇರುವುದು ಕಂಡುಬಂದ ಕೂಡಲೆ ಗುತ್ತಿಗೆದಾರನಿಗೆ ವಿಚಾರ ಮುಟ್ಟಿಸಿದವು. ಮೇಲ್ಚಾವಣಿ ಕಾಮಗಾರಿ ಮಾಡುತ್ತಿರುವ ಸಂದರ್ಭದಲ್ಲಿ ಗೋಡೆಗಳು ಅಲುಗಾಡುತ್ತಿದ್ದವು. ಇದನ್ನು ಕಂಡು ಕೂಡಲೇ ಕಾಮಗಾರಿಯನ್ನು ಸ್ಥಗಿತ ಮಾಡಲು ಮನವಿ ಮಾಡಿದರೂ ಗುತ್ತಿಗೆದಾರ ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಣದ ದುರಾಸೆಗೆ ಬೇಕಾಬಿಟ್ಟಿ ಕಾಮಗಾರಿಯನ್ನು ನಿರ್ಮಾಣ ಮಾಡಿದ್ದಾರೆ. ಕಳಪೆ ಕಾಮಗಾರಿಯಿಂದಾಗಿ ಶಾಲಾ ಮಕ್ಕಳನ್ನು ಸಾವಿನ ಕೂಪಕ್ಕೆ ನೂಕು ವಂತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಸಂಬಂಧಪಟ್ಟ ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು ಗುತ್ತಿಗೆದಾರ ಮತ್ತು ಜಿ.ಪಂ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು