1:39 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ನಂಜನಗೂಡು: ಶಾಲಾ ನೂತನ ಕೊಠಡಿ ಸೋರಿಕೆ; ಅಧಿಕಾರಿಗಳಿಗೆ ಛೀಮಾರಿ ಹಾಕಿದ ಗ್ರಾಮಸ್ಥರು!

24/06/2024, 22:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹಣದ ದುರಾಸೆಗೆ ಗುತ್ತಿಗೆದಾರ ಮತ್ತು ಇಂಜಿನಿಯರ್ ಮಾಡಿದ ಎಡವಟ್ಟಿನಿಂದ ಶಾಲಾ ಮಕ್ಕಳು ಕೂತು ಪಾಠ ಕೇಳುವ ನೂತನ ಶಾಲಾ ಕೊಠಡಿ ಕಾಮಗಾರಿ ಮಳೆಗೆ ಸೋರುವಂತಾಗಿದೆ.
ಸಂಬಂಧಪಟ್ಟ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಗ್ರಾಮಕ್ಕೆ ಬರಮಾಡಿಕೊಂಡು ಗ್ರಾಮಸ್ಥರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಂಜನಗೂಡು ತಾಲೂಕಿನ ಇಬ್ಜಾಲ ಗ್ರಾಮದಲ್ಲಿ ನಡೆದಿದೆ.
2022-23ರ ಸಾಲಿನ ಅವಧಿಯಲ್ಲಿ ನಂಜನಗೂಡಿನ ಮಾಜಿ ಶಾಸಕ ಹರ್ಷವರ್ಧನ್ ಅವರ ಅವಧಿಯಲ್ಲಿ ಶಾಲಾ ಕೊಠಡಿಗಳ ಅಭಿವೃದ್ಧಿಗೆ 50 ಕೋಟಿಗೂ ಅಧಿಕ ಹಣವನ್ನು ಮಂಜೂರು ಮಾಡಿಸಿದ್ದರು.
ಜಿಲ್ಲಾ ಪಂಚಾಯಿತಿಯ ಎಂಜಿನಿಯರ್ ಇಲಾಖೆಯವರಿಗೆ ಕಾಮಗಾರಿಯ ಜವಾಬ್ದಾರಿಯನ್ನ ವಹಿಸಲಾಗಿತ್ತು. ನಂಜನಗೂಡು ತಾಲೂಕಿನ ಇಬ್ಜಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗೆ 14 ಲಕ್ಷಗಳ ಹಣವನ್ನು ಮಂಜೂರು ಮಾಡಿ ಜಿಪಂ ಎ ಇ ಇ ವೆಂಕಟೇಶ್ ಎಂಬುವರು ನಂಜನಗೂಡಿನ ಸ್ಥಳೀಯ ಗುತ್ತಿಗೆದಾರ ವ್ಯಕ್ತಿ ಒಬ್ಬರಿಗೆ ಯಾವುದೇ ಟೆಂಡರಿಲ್ಲದೆ ಕಾಮಗಾರಿಯ ಜವಾಬ್ದಾರಿ ವಹಿಸಿದ್ದರು.
ನೂತನ ಶಾಲಾ ಕೊಠಡಿ ಪೂರ್ಣಗೊಳ್ಳುವ ಮುನ್ನವೇ ಸಣ್ಣ ಪ್ರಮಾಣದ ಮಳೆ ಬಿದ್ದರೂ ಮೇಲ್ಚಾವಣಿ ಸೋರುತ್ತಿರುವ ಕಾರಣ ಇಬ್ಜಾಲ ಗ್ರಾಮಸ್ಥರು ಶಾಸಕ ದರ್ಶನ್ ಧ್ರುವನಾರಾಯಣ್ ಅವರ ಗಮನಕ್ಕೆ ವಿಚಾರ ಮುಟ್ಟಿಸಿದ್ದರು.
ಶಾಸಕರು ಕೂಡ ಸಂಬಂಧಪಟ್ಟ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಿ ಇಂಜಿನಿಯರ್ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು.
ಇಬ್ಜಾಲ ಗ್ರಾಮಸ್ಥರು ನಂಜನಗೂಡು ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ಮತ್ತು ಇಂಜಿನಿಯರ್ ಈರಯ್ಯ ಎಂಬುವರನ್ನು ಸೋರುತ್ತಿರುವ ಕೊಠಡಿ ಬಳಿ ಬರಮಾಡಿಕೊಂಡು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರ ಮಾತಿಗೆ ಉತ್ತರಿಸಲಾಗದ ಅಧಿಕಾರಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ನಂತರ ಮಾತನಾಡಿದ ಗ್ರಾಮಸ್ಥರು ಕಟ್ಟಡ ನಿರ್ಮಾಣದ ಸಂದರ್ಭದಲ್ಲಿ ಅಡಿಪಾಯವನ್ನು ಸರಿಯಾದ ರೀತಿಯಲ್ಲಿ ನಿರ್ಮಾಣ ಮಾಡದೇ ಕಳಪೆ ಪ್ರಮಾಣದಲ್ಲಿ ಸಿಮೆಂಟ್ ಮತ್ತು ಗುಣಮಟ್ಟದ ಡಸ್ಟ್ ಬಳಕೆ ಮಾಡದೆ ಇರುವುದು ಕಂಡುಬಂದ ಕೂಡಲೆ ಗುತ್ತಿಗೆದಾರನಿಗೆ ವಿಚಾರ ಮುಟ್ಟಿಸಿದವು. ಮೇಲ್ಚಾವಣಿ ಕಾಮಗಾರಿ ಮಾಡುತ್ತಿರುವ ಸಂದರ್ಭದಲ್ಲಿ ಗೋಡೆಗಳು ಅಲುಗಾಡುತ್ತಿದ್ದವು. ಇದನ್ನು ಕಂಡು ಕೂಡಲೇ ಕಾಮಗಾರಿಯನ್ನು ಸ್ಥಗಿತ ಮಾಡಲು ಮನವಿ ಮಾಡಿದರೂ ಗುತ್ತಿಗೆದಾರ ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಣದ ದುರಾಸೆಗೆ ಬೇಕಾಬಿಟ್ಟಿ ಕಾಮಗಾರಿಯನ್ನು ನಿರ್ಮಾಣ ಮಾಡಿದ್ದಾರೆ. ಕಳಪೆ ಕಾಮಗಾರಿಯಿಂದಾಗಿ ಶಾಲಾ ಮಕ್ಕಳನ್ನು ಸಾವಿನ ಕೂಪಕ್ಕೆ ನೂಕು ವಂತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಸಂಬಂಧಪಟ್ಟ ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು ಗುತ್ತಿಗೆದಾರ ಮತ್ತು ಜಿ.ಪಂ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು