4:30 PM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ನಂಜನಗೂಡು: ಶಕ್ತಿ ದೇವತೆ ಶ್ರೀ ಚಿಕ್ಕಮ್ಮದೇವಿ ಅಮ್ಮನವರ ಜಾತ್ರಾ ಮಹೋತ್ಸವ

05/02/2025, 21:08

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿ ಅಮ್ಮನವರ ಜಾತ್ರಾ ಮಹೋತ್ಸವ ವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು
ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾ ಪೂಜೆ, ಕಳಸ ಪೂಜೆಯೊಂದಿಗೆ ದೇವಾಲಯದಿಂದ ಹೊರ ತಂದ ಅಲಂಕೃತ ಶ್ರೀ ಚಿಕ್ಕಮ್ಮ ದೇವಿ ಅಮ್ಮನವರ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ ಹೆಣ್ಣು ಮಕ್ಕಳಿಂದ ತಂದ ಹಾಲರವಿ ಉತ್ಸವಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಚಿಕ್ಕರಂಗನಾಯಕ ಚಾಲನೆ ನೀಡಿದರು.


ತಮಟೆ, ಕಂಸಾಳೆ ಹಾಗೂ ಮಂಗಳವಾದ್ಯ ಸೇರಿದಂತೆ ಛತ್ರಿ ಚಾಮರ, ಸತ್ತಿಗೆ, ಸುರಪಾನಿಗಳೊಂದಿಗೆ ಶ್ರೀ ಅಮ್ಮನವರ ಹಾಲರವಿ ಹಾಗೂ ಉತ್ಸವವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ನಡೆಸಲಾಯಿತು.
ಸುತ್ತಮುತ್ತಲಿನ ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿಗೆ ಪೂಜೆ ಸಲ್ಲಿಸಿ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಉತ್ಸವದಲ್ಲಿ ಪಾಲ್ಗೊಂಡ ದೇವರ ಗುಡ್ಡಪ್ಪ ಅವರಿಗೆ ಗ್ರಾಮದ ಪ್ರತಿಯೊಬ್ಬ ಮನೆಯವರು ನೀರು ಊಯ್ದು ಅರಿಶಿನ ಕುಂಕುಮ ಹಚ್ಚಿ ವಿಶಿಷ್ಟವಾಗಿ ಪೂಜೆ ಸಲ್ಲಿಸಲಾಗುತ್ತಿತ್ತು.ಬಂದ ಎಲ್ಲಾ ಭಕ್ತರಿಗೆ ಗ್ರಾಮಸ್ಥರಿಂದ ಅನ್ನಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು.
ಬಳಿಕ ಗ್ರಾಮದ ಹಾಗೂ ಬಿಜೆಪಿ ಮುಖಂಡ ಚಿಕ್ಕರಂಗನಾಯಕ ಮಾತನಾಡಿ ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ತಾಯಿಯು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಶುಭ ಹಾರೈಸಿ ಜಾತ್ರಾ ಮಹೋತ್ಸವದ ಬಗ್ಗೆ ವಿವರಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕಾಂತರಾಜು, ಸದಸ್ಯರಾದ ಗೋವಿಂದರಾಜು, ಮಾಜಿ ಸದಸ್ಯ ಚಿಕ್ಕಣ್ಣ, ಯಜಮಾನ್ ಚಿನ್ನಸ್ವಾಮಿ, ಮರಿಗಂಡ ನಾಯಕ ಸೇರಿದಂತೆ ನಾಯಕ ಜನಾಂಗದ ಕುಲಬಾಂಧವರು, ಯಜಮಾನರುಗಳು, ಮುಖಂಡರು ಸೇರಿದಂತೆ ಚಿಕ್ಕ ರಂಗನಾಯಕ್ ಅಭಿಮಾನಿ ಬಳಗದ ಸದಸ್ಯರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು