11:25 PM Sunday19 - April 2026
ಬ್ರೇಕಿಂಗ್ ನ್ಯೂಸ್
ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು…

ಇತ್ತೀಚಿನ ಸುದ್ದಿ

ನಂಜನಗೂಡು: ಶಕ್ತಿ ದೇವತೆ ಶ್ರೀ ಚಿಕ್ಕಮ್ಮದೇವಿ ಅಮ್ಮನವರ ಜಾತ್ರಾ ಮಹೋತ್ಸವ

05/02/2025, 21:08

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿ ಅಮ್ಮನವರ ಜಾತ್ರಾ ಮಹೋತ್ಸವ ವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು
ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾ ಪೂಜೆ, ಕಳಸ ಪೂಜೆಯೊಂದಿಗೆ ದೇವಾಲಯದಿಂದ ಹೊರ ತಂದ ಅಲಂಕೃತ ಶ್ರೀ ಚಿಕ್ಕಮ್ಮ ದೇವಿ ಅಮ್ಮನವರ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ ಹೆಣ್ಣು ಮಕ್ಕಳಿಂದ ತಂದ ಹಾಲರವಿ ಉತ್ಸವಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಚಿಕ್ಕರಂಗನಾಯಕ ಚಾಲನೆ ನೀಡಿದರು.


ತಮಟೆ, ಕಂಸಾಳೆ ಹಾಗೂ ಮಂಗಳವಾದ್ಯ ಸೇರಿದಂತೆ ಛತ್ರಿ ಚಾಮರ, ಸತ್ತಿಗೆ, ಸುರಪಾನಿಗಳೊಂದಿಗೆ ಶ್ರೀ ಅಮ್ಮನವರ ಹಾಲರವಿ ಹಾಗೂ ಉತ್ಸವವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ನಡೆಸಲಾಯಿತು.
ಸುತ್ತಮುತ್ತಲಿನ ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿಗೆ ಪೂಜೆ ಸಲ್ಲಿಸಿ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಉತ್ಸವದಲ್ಲಿ ಪಾಲ್ಗೊಂಡ ದೇವರ ಗುಡ್ಡಪ್ಪ ಅವರಿಗೆ ಗ್ರಾಮದ ಪ್ರತಿಯೊಬ್ಬ ಮನೆಯವರು ನೀರು ಊಯ್ದು ಅರಿಶಿನ ಕುಂಕುಮ ಹಚ್ಚಿ ವಿಶಿಷ್ಟವಾಗಿ ಪೂಜೆ ಸಲ್ಲಿಸಲಾಗುತ್ತಿತ್ತು.ಬಂದ ಎಲ್ಲಾ ಭಕ್ತರಿಗೆ ಗ್ರಾಮಸ್ಥರಿಂದ ಅನ್ನಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು.
ಬಳಿಕ ಗ್ರಾಮದ ಹಾಗೂ ಬಿಜೆಪಿ ಮುಖಂಡ ಚಿಕ್ಕರಂಗನಾಯಕ ಮಾತನಾಡಿ ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ತಾಯಿಯು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಶುಭ ಹಾರೈಸಿ ಜಾತ್ರಾ ಮಹೋತ್ಸವದ ಬಗ್ಗೆ ವಿವರಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕಾಂತರಾಜು, ಸದಸ್ಯರಾದ ಗೋವಿಂದರಾಜು, ಮಾಜಿ ಸದಸ್ಯ ಚಿಕ್ಕಣ್ಣ, ಯಜಮಾನ್ ಚಿನ್ನಸ್ವಾಮಿ, ಮರಿಗಂಡ ನಾಯಕ ಸೇರಿದಂತೆ ನಾಯಕ ಜನಾಂಗದ ಕುಲಬಾಂಧವರು, ಯಜಮಾನರುಗಳು, ಮುಖಂಡರು ಸೇರಿದಂತೆ ಚಿಕ್ಕ ರಂಗನಾಯಕ್ ಅಭಿಮಾನಿ ಬಳಗದ ಸದಸ್ಯರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು