9:34 PM Monday3 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ನಂಜನಗೂಡು: ಶಕ್ತಿ ದೇವತೆ ಶ್ರೀ ಚಿಕ್ಕಮ್ಮದೇವಿ ಅಮ್ಮನವರ ಜಾತ್ರಾ ಮಹೋತ್ಸವ

05/02/2025, 21:08

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿ ಅಮ್ಮನವರ ಜಾತ್ರಾ ಮಹೋತ್ಸವ ವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು
ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾ ಪೂಜೆ, ಕಳಸ ಪೂಜೆಯೊಂದಿಗೆ ದೇವಾಲಯದಿಂದ ಹೊರ ತಂದ ಅಲಂಕೃತ ಶ್ರೀ ಚಿಕ್ಕಮ್ಮ ದೇವಿ ಅಮ್ಮನವರ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ ಹೆಣ್ಣು ಮಕ್ಕಳಿಂದ ತಂದ ಹಾಲರವಿ ಉತ್ಸವಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಚಿಕ್ಕರಂಗನಾಯಕ ಚಾಲನೆ ನೀಡಿದರು.


ತಮಟೆ, ಕಂಸಾಳೆ ಹಾಗೂ ಮಂಗಳವಾದ್ಯ ಸೇರಿದಂತೆ ಛತ್ರಿ ಚಾಮರ, ಸತ್ತಿಗೆ, ಸುರಪಾನಿಗಳೊಂದಿಗೆ ಶ್ರೀ ಅಮ್ಮನವರ ಹಾಲರವಿ ಹಾಗೂ ಉತ್ಸವವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ನಡೆಸಲಾಯಿತು.
ಸುತ್ತಮುತ್ತಲಿನ ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿಗೆ ಪೂಜೆ ಸಲ್ಲಿಸಿ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಉತ್ಸವದಲ್ಲಿ ಪಾಲ್ಗೊಂಡ ದೇವರ ಗುಡ್ಡಪ್ಪ ಅವರಿಗೆ ಗ್ರಾಮದ ಪ್ರತಿಯೊಬ್ಬ ಮನೆಯವರು ನೀರು ಊಯ್ದು ಅರಿಶಿನ ಕುಂಕುಮ ಹಚ್ಚಿ ವಿಶಿಷ್ಟವಾಗಿ ಪೂಜೆ ಸಲ್ಲಿಸಲಾಗುತ್ತಿತ್ತು.ಬಂದ ಎಲ್ಲಾ ಭಕ್ತರಿಗೆ ಗ್ರಾಮಸ್ಥರಿಂದ ಅನ್ನಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು.
ಬಳಿಕ ಗ್ರಾಮದ ಹಾಗೂ ಬಿಜೆಪಿ ಮುಖಂಡ ಚಿಕ್ಕರಂಗನಾಯಕ ಮಾತನಾಡಿ ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ತಾಯಿಯು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಶುಭ ಹಾರೈಸಿ ಜಾತ್ರಾ ಮಹೋತ್ಸವದ ಬಗ್ಗೆ ವಿವರಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕಾಂತರಾಜು, ಸದಸ್ಯರಾದ ಗೋವಿಂದರಾಜು, ಮಾಜಿ ಸದಸ್ಯ ಚಿಕ್ಕಣ್ಣ, ಯಜಮಾನ್ ಚಿನ್ನಸ್ವಾಮಿ, ಮರಿಗಂಡ ನಾಯಕ ಸೇರಿದಂತೆ ನಾಯಕ ಜನಾಂಗದ ಕುಲಬಾಂಧವರು, ಯಜಮಾನರುಗಳು, ಮುಖಂಡರು ಸೇರಿದಂತೆ ಚಿಕ್ಕ ರಂಗನಾಯಕ್ ಅಭಿಮಾನಿ ಬಳಗದ ಸದಸ್ಯರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು