2:38 AM Friday12 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ

14/01/2025, 19:35

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಆಡಳಿತ ವತಿಯಿಂದ ಇಂದು ತಾಲೂಕು ಕಚೇರಿ ಸಭಾಂಗಣದಲ್ಲಿ ಶಿವಶರಣ ಶ್ರೀ ಸಿದ್ದರಾಮೇಶ್ವರರ ಜಯಂತಿ ಆಚರಣೆಯಲ್ಲಿ ಸರಳವಾಗಿ ಆಚರಿಸಲಾಯಿತು.
ತಹಶೀಲ್ದಾರ್ ಶಿವಕುಮಾರ್ ಕಾಸನೂರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಭೋವಿ ಜನಾಂಗದ ಮುಖಂಡರು ಶ್ರೀ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಮಠದ ಶ್ರೀ ಇಮ್ಮಡಿ ಉದ್ದಾನ ಸ್ವಾಮಿಗಳು ಆಶೀರ್ವಚನ ನೀಡಿ ಶ್ರೀ ಸಿದ್ದರಾಮೇಶ್ವರ ಜೀವನ ಚರಿತ್ರೆ ಹಾಗೂ ಅವರ ವಿಚಾರಧಾರೆಗಳನ್ನು ತಿಳಿಸುತ್ತಾ ಶ್ರೀ ಸಿದ್ದರಾಮೇಶ್ವರರು ಉತ್ತಮ ವಚನಕಾರರು ಹಾಗೂ ಶಿವಶರಣರು ಆಗಿದ್ದರು. ಅವರ ತತ್ವ ಆದರ್ಶಗಳನ್ನು ಇಂದಿನ ಪೀಳಿಗೆ ಗೆ ತಿಳಿಸುವ ಮೂಲಕ ಅವರನ್ನು ಸುಸಂಸ್ಕೃತರನ್ನಾಗಿ ಮಾಡುವಂತೆ ತಿಳಿಸಿದರು.


ತಹಸೀಲ್ದಾರ್ ಶಿವಕುಮಾರ್ ಕಾಸನೂರ್ ಶ್ರೀ ಸಿದ್ದರಾಮೇಶ್ವರ ಜಯಂತಿ ಶುಭಾಶಯ ಕೋರಿದರು.
ಇದೇ ಸಂದರ್ಭ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಭೋವಿ ಸಮಾಜದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಸಮಾಜದ ಮುಖಂಡರಾದ ಲಿಂಗರಾಜು, ಪಾಪಣ್ಣ, ಮಹಾದೇವ್, ವಸಂತ, ಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು