6:56 AM Thursday9 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ

14/01/2025, 19:35

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಆಡಳಿತ ವತಿಯಿಂದ ಇಂದು ತಾಲೂಕು ಕಚೇರಿ ಸಭಾಂಗಣದಲ್ಲಿ ಶಿವಶರಣ ಶ್ರೀ ಸಿದ್ದರಾಮೇಶ್ವರರ ಜಯಂತಿ ಆಚರಣೆಯಲ್ಲಿ ಸರಳವಾಗಿ ಆಚರಿಸಲಾಯಿತು.
ತಹಶೀಲ್ದಾರ್ ಶಿವಕುಮಾರ್ ಕಾಸನೂರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಭೋವಿ ಜನಾಂಗದ ಮುಖಂಡರು ಶ್ರೀ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಮಠದ ಶ್ರೀ ಇಮ್ಮಡಿ ಉದ್ದಾನ ಸ್ವಾಮಿಗಳು ಆಶೀರ್ವಚನ ನೀಡಿ ಶ್ರೀ ಸಿದ್ದರಾಮೇಶ್ವರ ಜೀವನ ಚರಿತ್ರೆ ಹಾಗೂ ಅವರ ವಿಚಾರಧಾರೆಗಳನ್ನು ತಿಳಿಸುತ್ತಾ ಶ್ರೀ ಸಿದ್ದರಾಮೇಶ್ವರರು ಉತ್ತಮ ವಚನಕಾರರು ಹಾಗೂ ಶಿವಶರಣರು ಆಗಿದ್ದರು. ಅವರ ತತ್ವ ಆದರ್ಶಗಳನ್ನು ಇಂದಿನ ಪೀಳಿಗೆ ಗೆ ತಿಳಿಸುವ ಮೂಲಕ ಅವರನ್ನು ಸುಸಂಸ್ಕೃತರನ್ನಾಗಿ ಮಾಡುವಂತೆ ತಿಳಿಸಿದರು.


ತಹಸೀಲ್ದಾರ್ ಶಿವಕುಮಾರ್ ಕಾಸನೂರ್ ಶ್ರೀ ಸಿದ್ದರಾಮೇಶ್ವರ ಜಯಂತಿ ಶುಭಾಶಯ ಕೋರಿದರು.
ಇದೇ ಸಂದರ್ಭ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಭೋವಿ ಸಮಾಜದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಸಮಾಜದ ಮುಖಂಡರಾದ ಲಿಂಗರಾಜು, ಪಾಪಣ್ಣ, ಮಹಾದೇವ್, ವಸಂತ, ಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು