2:40 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀ ನಂಜುಂಡೇಶ್ವರನ ಸನ್ನಿಧಿಯಲ್ಲಿ ಸಾಮೂಹಿಕ ವಿವಾಹ: ನವ ಜೀವನಕ್ಕೆ ಕಾಲಿಟ್ಟ 8 ಜೋಡಿಗಳು

31/01/2024, 15:19

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಾಂ

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಮಾಂಗಲ್ಯ ಭಾಗ್ಯ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನವ ಜೀವನಕ್ಕೆ ಎಂಟು ಜೋಡಿಗಳು ಕಾಲಿಟ್ಟಿದ್ದಾರೆ.


ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಹಾಗೂ ಜಿಲ್ಲಾಡಳಿತ ಮೈಸೂರು ಇವರ ಸಹಯೋಗದಲ್ಲಿ ಮಾಂಗಲ್ಯ ಭಾಗ್ಯ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು.
ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಅಪರ ಜಿಲ್ಲಾಧಿಕಾರಿ ಲೋಕನಾಥ್ ಸೇರಿದಂತೆ ಮತ್ತಿತರ ಗಣ್ಯರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು
ಬಳಿಕ ವಧುವರರಿಗೆ ಮಾಂಗಲ್ಯ ವಿತರಣೆ ಮಾಡಿದ ಗಣ್ಯರು
ಪುರೋಹಿತರ ಮಂತ್ರಘೋಷ ಹಾಗೂ ಗಟ್ಟಿ ಮೇಳದೊಂದಿಗೆ ಮಾಂಗಲ್ಯ ದಾರಣೆ ನಡೆಯಿತು.
ತಾಳಿ ಕಟ್ಟಿದ ವಧು ಮತ್ತು ವರರಿಗೆ ನೆರದಿದ್ದ ಜನರು ಮತ್ತು ಗಣ್ಯರು ಶುಭ ಹಾರೈಸಿದರು.
ಶಶಿಧರ್ ದೀಕ್ಷಿತ್ ನೇತೃತ್ವದಲ್ಲಿ ನವ ದಂಪತಿಗಳಿಗೆ ಶಾಸ್ತ್ರೋಕ್ತವಾಗಿ ಮದುವೆ ಮಾಡಿಸಲಾಯಿತು.
ಬಳಿಕ ಶಾಸಕ ದರ್ಶನ್ ದ್ರುವನಾರಾಯಣ್ ಹಾಗೂ ಅಪರ ಜಿಲ್ಲಾಧಿಕಾರಿ ಲೋಕನಾಥ್ ಮಾತನಾಡಿ ನೂತನ ವಧು ವರರಿಗೆ ಆಶೀರ್ವದಿಸಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು
ಮದುವೆಗೆ ಆಗಮಿಸಿದ ಎಲ್ಲರಿಗೂ ದಾಸೋಹ ಭವನದಲ್ಲಿ ಹೋಳಿಗೆ ಊಟವನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಲೋಕನಾಥ್, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ದೇವಾಲಯದ ಅರ್ಚಕರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು