1:41 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ನಂಜನಗೂಡು: ಶ್ರೀ ನೀಲಕಂಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

14/11/2024, 21:07

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಪಟ್ಟಣದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ಅರ್ಥಪೂರ್ಣವಾಗಿ ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.


ಪುಟ್ಟ ಪುಟ್ಟ ವಿದ್ಯಾರ್ಥಿಗಳು ಸೇರಿದಂತೆ ವೇದಿಕೆ ಮೇಲಿನ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಮುರುಗೇಶ್ ಮಾತನಾಡಿ ನಮ್ಮ ರಾಷ್ಟ್ರದ ಮೊದಲ ಪ್ರಧಾನ ಮಂತ್ರಿಗಳಾದ ಜವಾಹರ್ಲಾಲ್ ನೆಹರು ಅವರ ಮಕ್ಕಳ ಪ್ರೇಮದಿಂದಾಗಿ ಅವರ ಜನ್ಮ ದಿನಾಚರಣೆಯ ದಿನದಂದು ಮಕ್ಕಳ ದಿನಾಚರಣೆಯ ಆಚರಣೆಯನ್ನು ಆರಂಭಿಸಲಾಯಿತು ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಇದೇ ಸಂದರ್ಭ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ, ವಿಜೇತರಾದ ಮಕ್ಕಳಿಗೆ ವೇದಿಕೆ ಮೇಲಿನ ಗಣ್ಯರು ಬಹುಮಾನ ವಿತರಣೆ ಮಾಡಿದರು. ಇದಕ್ಕೂ ಮುನ್ನ ಮೈಸೂರಿನ ಪ್ರಸಿದ್ಧ ಜಾದುಗಾರರಾದ ಗುರುಸ್ವಾಮಿ ಅವರಿಂದ ಜಾದು ಮತ್ತು ಮಾತನಾಡುವ ಗೊಂಬೆ ಕಾರ್ಯಕ್ರಮ ನಡೆಸಿಕೊಟ್ಟು ಮಕ್ಕಳಿಗೆ ಉತ್ತಮ ಮನರಂಜನೆ ನೀಡಿ ರಂಜಿಸಿದರು ಹಾಗೂ ಮಾದೇಶ್ ಅವರು ಭಕ್ತಿ ಗೀತೆಗಳನ್ನು ಆಡುವ ಮೂಲಕ ಮಕ್ಕಳನ್ನು ಮಂತ್ರಮುಗ್ತರನ್ನಾಗಿಸಿದರು
ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಅರುಣೇಶ್, ಕಾರ್ಯದರ್ಶಿ ಕುಮಾರ್, ಮಹಾದೇವಮ್ಮ ಮತ್ತು ಕೆಂಪಮ್ಮ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು