11:26 AM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 26ನೇ ಬ್ರಹ್ಮೋತ್ಸವ: 18 ಮೆಟ್ಟಿಲುಗಳ ಪಡಿ ಪೂಜೆ

18/12/2023, 22:19

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಕಪಿಲಾ ನದಿ ತೀರದಲ್ಲಿರುವ ಚಿಕ್ಕ ಶಬರಿಮಲೆ ಎಂದೇ ಕರೆಯಲ್ಪಡುವ ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 26ನೇ ಬ್ರಹ್ಮೋತ್ಸವದ ಅಂಗವಾಗಿ ಭಾನುವಾರ ರಾತ್ರಿ ಪವಿತ್ರ 18 ಮೆಟ್ಟಿಲುಗಳ ಪಡಿ ಪೂಜೆಯು ಶ್ರದ್ಧಾಭಕ್ತಿಯಿಂದ ನೆರವೇರಿತು.


ಶ್ರೀ ಕ್ಷೇತ್ರ ಶಬರಿಮಲೆಯ ಮಾದರಿಯಲ್ಲೇ ಎಲ್ಲಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ದೇವಾಲಯದ ಗುರುಸ್ವಾಮಿಗಳಾದ ದೇವರಾಜ ಸ್ವಾಮಿಗಳ ನೇತೃತ್ವದಲ್ಲಿ ಪಡಿ ಪೂಜೆ ನಡೆಯಿತು. ಪಡಿ ಪೂಜೆ ಅಂಗವಾಗಿ ಪವಿತ್ರ 18 ಮೆಟ್ಟಿಲುಗಳೂ ಸೇರಿದಂತೆ ದೇವಾಲಯವನ್ನು ವಿವಿಧ ಬಗೆಯ ಬಣ್ಣ ಬಣ್ಣದ ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಬಳಿಕ ಚೆಂಡೆ ಮೇಳದೊಂದಿಗೆ ಶ್ರೀ ಕ್ಷೇತ್ರ ಶಬರಿಮಲೆಯ ಅರ್ಚಕರಿಂದ ಪವಿತ್ರ 18 ಮೆಟ್ಟಿಲುಗಳಿಗೆ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಪವಿತ್ರ ಮೆಟ್ಟಿಲುಗಳನ್ನು ಶುದ್ದಿ ಗೊಳಿಸಲಾಯಿತು. ನಂತರ ಮೆಟ್ಟಿಲುಗಳಿಗೆ ಇಡುಗಾಯಿ ಒಡೆದು ಕರ್ಪೂರ ಹಚ್ಚಿ ಪುಷ್ಪಾರ್ಚನೆ ಮಾಡುವ ಮೂಲಕ ಅಯ್ಯಪ್ಪನ ನಾಮಸ್ಮರಣೆಯೊಂದಿಗೆ ಗುರುಸ್ವಾಮಿಗಳು ಸೇರಿದಂತೆ ಅಯ್ಯಪ್ಪನ ಭಕ್ತರು 18 ಮೆಟ್ಟಿಲುಗಳನ್ನು ಹತ್ತಿ ಬಂದು ಶ್ರೀ ಸ್ವಾಮಿ ಅಯ್ಯಪ್ಪನ ದರ್ಶನ ಪಡೆದು ಪುಳಕಿತರಾದರು.


ಶ್ರೀ ಸ್ವಾಮಿಗೆ ಮಹಾ ಮಂಗಳಾರತಿ ಸಲ್ಲಿಸಿ ಬಂದ ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಪಟ್ಟಣವು ಸೇರಿದಂತೆ ರಾಜ್ಯದ ವಿವಿಧಡೆಯಿಂದ ಸಾವಿರಾರು ಭಕ್ತರು ಪಡಿ ಪೂಜಿಯಲ್ಲಿ ಭಾಗವಹಿಸಿ ತಮ್ಮ ಭಕ್ತಿ ಭಾವ ಮೆರೆದರು. ಇದೇ ಸಂದರ್ಭ ದೇವಾಲಯದ ಶಾಸ್ತ ಕಲಾ ಮಂಟಪದಲ್ಲಿ ನಂಜನಗೂಡಿನ ಸುರಭಿ ಗಾನ ಸಂಘದ ವತಿಯಿಂದ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ದೇವಾಲಯದ ಗುರುಸ್ವಾಮಿಗಳಾದ ಪಿ. ದೇವರಾಜಸ್ವಾಮಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು