11:49 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನೆರವೇರಿದ ಶಿವ ದೀಪೋತ್ಸವ: ನಂಜುಂಡೇಶ್ವರ ಹಾಗೂ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಗೆ ಪೂಜೆ

27/11/2023, 20:38

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನವೆಂಬರ್ 28ರಂದು ನಡೆಯಲಿರುವ ಚಿಕ್ಕಜಾತ್ರ ಮಹೋತ್ಸವದ ಅಂಗವಾಗಿ 6ನೇ ದಿನವಾದ ಭಾನುವಾರ ಸಂಜೆ ಕಾರ್ತಿಕ ಮಾಸ ಹಾಗೂ ಹುಣ್ಣಿಮೆ ದಿನದಂದು ಶ್ರೀ ಶಿವ ದೀಪೋತ್ಸವವನ್ನು ಹಲವಾರು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ಶಿವ ದೀಪೋತ್ಸವಕ್ಕಾಗಿ ದೇವಾಲಯದ ಮುಂದೆ ಸುಮಾರು 20 ಅಡಿಗೂ ಉದ್ದದ ದೀಪ ಸ್ತಂಭವನ್ನು ನಿರ್ಮಾಣ ಮಾಡಿ ಅದಕ್ಕೆ ಪೂಜೆ ಸಲ್ಲಿಸಲಾಯಿತು.


ಅಲಂಕೃತಗೊಂಡ ಶ್ರೀ ನಂಜುಂಡೇಶ್ವರ ಹಾಗೂ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಗಳನ್ನು ದೇವಾಲಯದಿಂದ ಹೊರ ತಂದು ಪ್ರಾಂಗಣದಲ್ಲಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ದೇವಾಲಯದ ಸುತ್ತ ಮೆರವಣಿಗೆಯಲ್ಲಿ ಬಂದ ಉತ್ಸವ ಮೂರ್ತಿಗಳನ್ನು ದೀಪ ಸ್ತಂಭದ ಮುಂಭಾಗದ ಶಿವ ಮಂಟಪದಲ್ಲಿ ಕೂರಿಸಲಾಯಿತು. ಬಳಿಕ ದೀಪಸ್ತಂಭದಲ್ಲಿ ಅಳವಡಿಸಲಾಗಿದ್ದ ದೀಪ ಹಾಗೂ ಎಣ್ಣೆ ಹಚ್ಚಿದ್ದ ನೂರಾರು ಪೆಂಜುಗಳನ್ನು ಹೊತ್ತಿ ಉರಿಸುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಲಾಯಿತು.
ಶಿವ ದೀಪೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ದೀಪೋತ್ಸವವನ್ನು ಕಣ್ತುಂಬಿ ಕೊಂಡು ತಮ್ಮ ಭಕ್ತಿ ಭಾವ ಮೆರೆದರು. ಅಲ್ಲದೆ ಹಲವಾರು ಭಕ್ತರು ದೇವಾಲಯದ ಮುಂಭಾಗ ವಿವಿಧ ಬಗೆಯ ದೀಪಾರತಿಗಳನ್ನು ಬೆಳಗುವ ಮೂಲಕ ಭಕ್ತಿಯ ಪರಾಕಾಷ್ಠೆ ಯಲ್ಲಿ ಮಿಂದೆದ್ದರು.
ಚಿಕ್ಕ ಜಾತ್ರೆ ಪ್ರಯುಕ್ತ ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಸೇರಿದಂತೆ ಅರ್ಚಕ ವೃಂದ ಹಾಗೂ ದೇವಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ದೇವಾಲಯದ ಅರ್ಚಕರು ಪಾರುಪತ್ತೆಗಾರರು ಆದ Krwa ಶಿವಶಂಕರ ದೀಕ್ಷಿತ್ ಮಾತನಾಡಿ, ಶಿವ ದೀಪೋತ್ಸವದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು