3:00 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನೆರವೇರಿದ ಶಿವ ದೀಪೋತ್ಸವ: ನಂಜುಂಡೇಶ್ವರ ಹಾಗೂ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಗೆ ಪೂಜೆ

27/11/2023, 20:38

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನವೆಂಬರ್ 28ರಂದು ನಡೆಯಲಿರುವ ಚಿಕ್ಕಜಾತ್ರ ಮಹೋತ್ಸವದ ಅಂಗವಾಗಿ 6ನೇ ದಿನವಾದ ಭಾನುವಾರ ಸಂಜೆ ಕಾರ್ತಿಕ ಮಾಸ ಹಾಗೂ ಹುಣ್ಣಿಮೆ ದಿನದಂದು ಶ್ರೀ ಶಿವ ದೀಪೋತ್ಸವವನ್ನು ಹಲವಾರು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ಶಿವ ದೀಪೋತ್ಸವಕ್ಕಾಗಿ ದೇವಾಲಯದ ಮುಂದೆ ಸುಮಾರು 20 ಅಡಿಗೂ ಉದ್ದದ ದೀಪ ಸ್ತಂಭವನ್ನು ನಿರ್ಮಾಣ ಮಾಡಿ ಅದಕ್ಕೆ ಪೂಜೆ ಸಲ್ಲಿಸಲಾಯಿತು.


ಅಲಂಕೃತಗೊಂಡ ಶ್ರೀ ನಂಜುಂಡೇಶ್ವರ ಹಾಗೂ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಗಳನ್ನು ದೇವಾಲಯದಿಂದ ಹೊರ ತಂದು ಪ್ರಾಂಗಣದಲ್ಲಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ದೇವಾಲಯದ ಸುತ್ತ ಮೆರವಣಿಗೆಯಲ್ಲಿ ಬಂದ ಉತ್ಸವ ಮೂರ್ತಿಗಳನ್ನು ದೀಪ ಸ್ತಂಭದ ಮುಂಭಾಗದ ಶಿವ ಮಂಟಪದಲ್ಲಿ ಕೂರಿಸಲಾಯಿತು. ಬಳಿಕ ದೀಪಸ್ತಂಭದಲ್ಲಿ ಅಳವಡಿಸಲಾಗಿದ್ದ ದೀಪ ಹಾಗೂ ಎಣ್ಣೆ ಹಚ್ಚಿದ್ದ ನೂರಾರು ಪೆಂಜುಗಳನ್ನು ಹೊತ್ತಿ ಉರಿಸುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಲಾಯಿತು.
ಶಿವ ದೀಪೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ದೀಪೋತ್ಸವವನ್ನು ಕಣ್ತುಂಬಿ ಕೊಂಡು ತಮ್ಮ ಭಕ್ತಿ ಭಾವ ಮೆರೆದರು. ಅಲ್ಲದೆ ಹಲವಾರು ಭಕ್ತರು ದೇವಾಲಯದ ಮುಂಭಾಗ ವಿವಿಧ ಬಗೆಯ ದೀಪಾರತಿಗಳನ್ನು ಬೆಳಗುವ ಮೂಲಕ ಭಕ್ತಿಯ ಪರಾಕಾಷ್ಠೆ ಯಲ್ಲಿ ಮಿಂದೆದ್ದರು.
ಚಿಕ್ಕ ಜಾತ್ರೆ ಪ್ರಯುಕ್ತ ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಸೇರಿದಂತೆ ಅರ್ಚಕ ವೃಂದ ಹಾಗೂ ದೇವಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ದೇವಾಲಯದ ಅರ್ಚಕರು ಪಾರುಪತ್ತೆಗಾರರು ಆದ Krwa ಶಿವಶಂಕರ ದೀಕ್ಷಿತ್ ಮಾತನಾಡಿ, ಶಿವ ದೀಪೋತ್ಸವದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು