4:22 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ನಂಜನಗೂಡು: ಶ್ರೀ ಚಿಕ್ಕದೇವಮ್ಮ ದೇವಾಲಯ ಉದ್ಘಾಟನೆ; ಕಂಸಾಳೆ ಕುಣಿತ, ಕಳಶಹೊತ್ತ ಗ್ರಾಮದ ಹೆಣ್ಣು ಮಕ್ಕಳ ಹಾಲರವಿ ಉತ್ಸವ

01/02/2024, 22:10

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕದೇವಮ್ಮನವರ ನೂತನ ದೇವಾಲಯವನ್ನು ಲೋಕಾರ್ಪಣೆಗೊಳಿಸಲಾಯಿತು.
ಗ್ರಾಮದ ಭಕ್ತರೊಬ್ಬರು ನಿರ್ಮಿಸಿರುವ ನೂತನ ದೇವಾಲಯವನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಹರತಲೆ ಚಿಕ್ಕರಂಗನಾಯಕ ಉದ್ಘಾಟಿಸಿದರು. ಇದೇ ಸಂದರ್ಭ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕಬಿನಿ ನಾಲೆಯಿಂದ ಹಾಲರವಿ ಉತ್ಸವ ತರಲಾಯಿತು.


ತಮಟೆ ವಾದ್ಯ, ಮಂಗಳವಾದ್ಯ, ಕಂಸಾಳೆ ಕುಣಿತಗಳೊಂದಿಗೆ ಕಳಶಹೊತ್ತ ಗ್ರಾಮದ ಹೆಣ್ಣು ಮಕ್ಕಳ ಹಾಲರವಿ ಉತ್ಸವ ಹಾಗೂ ಶ್ರೀ ಚಿಕ್ಕದೇವಮ್ಮನವರ ಉತ್ಸವ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆ ಉದ್ದಕ್ಕೂ ಮಹಿಳೆಯರು ಸೇರಿದಂತೆ ನೂರಾರು ಭಕ್ತರು ಈಡುಗಾಯಿ ಒಡೆಯುವ ಮೂಲಕ ದೇವರಿಗೆ ಪೂಜೆ ಸಲ್ಲಿಸಿ ತಮ್ಮ ಭಕ್ತಿ ಭಾವ ಮೆರೆದರು. ಇದೇ ಸಂದರ್ಭ ದೇವಾಲಯವನ್ನು ಉದ್ಘಾಟಿಸಿದ ಚಿಕ್ಕ ರಂಗನಾಯಕ ಅವರನ್ನು ದೇವಾಲಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು
ದೇವಾಲಯಕ್ಕೆ ಬಂದ ಎಲ್ಲ ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು. ಬಳಿಕ ಚಿಕ್ಕರಂಗನಾಯಕ ಮಾತನಾಡಿ ಶಕ್ತಿ ದೇವತೆ ಶ್ರೀ ಚಿಕ್ಕದೇವಮ್ಮನವರ ನೂತನ ದೇವಾಲಯವನ್ನು ಸಂತೋಷದಿಂದ ಉದ್ಘಾಟಿಸಿದ್ದೇನೆ. ತಾಯಿಯು ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು