5:28 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಂಜನಗೂಡು: ಶ್ರೀ ಚಿಕ್ಕದೇವಮ್ಮ ದೇವಾಲಯ ಉದ್ಘಾಟನೆ; ಕಂಸಾಳೆ ಕುಣಿತ, ಕಳಶಹೊತ್ತ ಗ್ರಾಮದ ಹೆಣ್ಣು ಮಕ್ಕಳ ಹಾಲರವಿ ಉತ್ಸವ

01/02/2024, 22:10

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕದೇವಮ್ಮನವರ ನೂತನ ದೇವಾಲಯವನ್ನು ಲೋಕಾರ್ಪಣೆಗೊಳಿಸಲಾಯಿತು.
ಗ್ರಾಮದ ಭಕ್ತರೊಬ್ಬರು ನಿರ್ಮಿಸಿರುವ ನೂತನ ದೇವಾಲಯವನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಹರತಲೆ ಚಿಕ್ಕರಂಗನಾಯಕ ಉದ್ಘಾಟಿಸಿದರು. ಇದೇ ಸಂದರ್ಭ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕಬಿನಿ ನಾಲೆಯಿಂದ ಹಾಲರವಿ ಉತ್ಸವ ತರಲಾಯಿತು.


ತಮಟೆ ವಾದ್ಯ, ಮಂಗಳವಾದ್ಯ, ಕಂಸಾಳೆ ಕುಣಿತಗಳೊಂದಿಗೆ ಕಳಶಹೊತ್ತ ಗ್ರಾಮದ ಹೆಣ್ಣು ಮಕ್ಕಳ ಹಾಲರವಿ ಉತ್ಸವ ಹಾಗೂ ಶ್ರೀ ಚಿಕ್ಕದೇವಮ್ಮನವರ ಉತ್ಸವ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆ ಉದ್ದಕ್ಕೂ ಮಹಿಳೆಯರು ಸೇರಿದಂತೆ ನೂರಾರು ಭಕ್ತರು ಈಡುಗಾಯಿ ಒಡೆಯುವ ಮೂಲಕ ದೇವರಿಗೆ ಪೂಜೆ ಸಲ್ಲಿಸಿ ತಮ್ಮ ಭಕ್ತಿ ಭಾವ ಮೆರೆದರು. ಇದೇ ಸಂದರ್ಭ ದೇವಾಲಯವನ್ನು ಉದ್ಘಾಟಿಸಿದ ಚಿಕ್ಕ ರಂಗನಾಯಕ ಅವರನ್ನು ದೇವಾಲಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು
ದೇವಾಲಯಕ್ಕೆ ಬಂದ ಎಲ್ಲ ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು. ಬಳಿಕ ಚಿಕ್ಕರಂಗನಾಯಕ ಮಾತನಾಡಿ ಶಕ್ತಿ ದೇವತೆ ಶ್ರೀ ಚಿಕ್ಕದೇವಮ್ಮನವರ ನೂತನ ದೇವಾಲಯವನ್ನು ಸಂತೋಷದಿಂದ ಉದ್ಘಾಟಿಸಿದ್ದೇನೆ. ತಾಯಿಯು ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು