8:47 PM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ನಂಜನಗೂಡು: ಎಸ್ಸೆಸ್ಸೆಲ್ಸಿ ಮಕ್ಕಳಿಗಾಗಿ ಫೇರ್ ವೆಲ್ ಕಾರ್ಯಕ್ರಮ; ನುರಿತ ವಿಷಯ ತಜ್ಞ ಶಿಕ್ಷಕರಿಂದ ಧೈರ್ಯ ತುಂಬುವ ಕೆಲಸ

20/02/2024, 19:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲೊಂದಾದ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅರುಣೇಶ್ ಹಾಗೂ ಶಿಕ್ಷಣ ಸಂಯೋಜಕ ರಮೇಶ್ ಸೇರಿದಂತೆ ಮತ್ತಿತರ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಬಳಿಕ ಶಿಕ್ಷಣ ಸಂಯೋಜಕರಾದ ರಮೇಶ್ ಮಾತನಾಡಿ, ಬುದ್ಧಿವಂತಿಕೆಯಿಂದ ಏನು ಪ್ರಯೋಜನವಿಲ್ಲ. ಶಿಕ್ಷಕರ ಬದ್ಧತೆ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಹಾಗಾಗಿ ಉಳಿದ ಕೆಲವೇ ದಿನಗಳಲ್ಲಿ ಬರುವ ಪರೀಕ್ಷೆಯಲ್ಲಿ ತಮ್ಮ ಬುದ್ಧಿವಂತಿಕೆ ಹಾಗೂ ಆಟೊಗಳನ್ನು ಬದಿಗಿಟ್ಟು ಪರಿಶ್ರಮದ ಕಡೆಗೆ ಗಮನ ಕೊಡಿ ಎಂದು ಕಿವಿಮಾತು ಹೇಳಿದರು.


ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕುಮಾರ್ ಮಾತನಾಡಿ, ಕೆಲವರ ಪರಿಶ್ರಮದಿಂದಾಗೀ 34 ವರ್ಷಗಳಿಂದ ಈ ಶಾಲೆ ಉತ್ತಮವಾಗಿ ಬೆಳೆದು ಬಂದಿದೆ. ಅದರಲ್ಲೂ ಒಂದು ಶಾಲೆ ಬೆಳೆಯಬೇಕಾದರೆ ಅದರಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ ಎಂದರು.
ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಮ್ಮ ಶಾಲೆಯು ಶೇ. 98 ಫಲಿತಾಂಶ ಪಡೆದಿತ್ತು. ಈ ಸಾಲಿನಲ್ಲಿ ನಮ್ಮ ಶಿಕ್ಷಕರ ಪರಿಶ್ರಮದ ಜೊತೆಗೆ ಶಿಕ್ಷಣ ಸಂಯೋಜಕರು ಮತ್ತು ವಿಷಯವಾರು ತಜ್ಞರ ಸಲಹೆ ಯೊಂದಿಗೆ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶ ತಂದೇ ತರುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪೂರಕವಾಗಿ ಎಲ್ಲಾ ವಿಷಯವಾರು ತಜ್ಞ ಶಿಕ್ಷಕರನ್ನು ಕರೆಸಿ ಅವರಿಂದ ಮಕ್ಕಳಿಗೆ ಪರೀಕ್ಷೆಯ ಬಗ್ಗೆ ಮಾಹಿತಿ ಹಾಗೂ ಧೈರ್ಯ ತುಂಬುವಂತಹ ಕೆಲಸ ಮಾಡಲಾಯಿತು ಹಾಗೂ ಎಲ್ಲಾ ವಿಷಯವಾರು ತಜ್ಞ ಶಿಕ್ಷಕರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ವಿದ್ಯಾರ್ಥಿಗಳು ನಡೆಸಿಕೊಟ್ಟ ಫ್ಯಾಷನ್ ಶೋ ಮತ್ತು ನೃತ್ಯ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು. ಫ್ಯಾಶನ್ ಶೋನಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭ ಬಹುಮಾನ ವಿತರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು